ಸುದ್ದಿಗಳು

ದೇವಚಳ್ಳ | ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮ ಪಂಚಾಯತ್ ದೇವಚಳ್ಳ, ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಇಲಾಖೆ ,ಭಾರತೀಯ ಅಂಚೆ ಇಲಾಖೆ ಪುತ್ತೂರು ,ಚಿರಾಯು ಸ್ಪೋರ್ಟ್ಸ ಕ್ಲಬ್ ಮಾವಿನಕಟ್ಟೆ ,ಅಮರ ಸಂಘಟನಾ ಸಮಿತಿ ರಿಜಿಸ್ಟರ್ ಸುಳ್ಯ, ಗ್ರಾಮವನ್ ಮಾವಿನಕಟ್ಟೆ ,ಮತ್ತು ಒಡಿಯೂರು ಸ್ವಸಹಾಯ ಸಂಘ ದೇವಚಳ್ಳ ಇವರುಗಳ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ,ಆರೋಗ್ಯ ತಪಾಸಣಾ ಶಿಬಿರ, ಆಧಾರ ಕಾರ್ಡು ಪರಿಷ್ಕರಣೆ ,ಈ ಶ್ರಮ ಕಾರ್ಡ್ ನೋಂದಣಿ ಮತ್ತು ಹಿರಿಯರ ಗುರುತು ಚೀಟಿ ನೋಂದಣಿ ಕಾರ್ಯಕ್ರಮವು ದೇವಚಳ್ಳ ಗ್ರಾಮ ಪಂಚಾಯತ್ ವಠಾರದಲ್ಲಿ ಜರುಗಿತು.

Advertisement

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿ  ಡಾ. ಕುಲದೀಪ್  ದೀಪ ಬೆಳಗಿಸಿ ಉದ್ಘಾಟಿಸಿದರು. ಪುತ್ತೂರು ರೋಟರಿ ಕ್ಲಬ್ಬಿನ ಅಧ್ಯಕ್ಷರು ಬ್ಲಡ್ ಬ್ಯಾಂಕಿನ ಮುಖ್ಯಸ್ಥ ಜಯರಾಜ್ ಭಂಡಾರಿ  ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಸುಳ್ಯ ಲಯನ್ಸ್ ಕ್ಲಬ್ ನ ಅಧ್ಯಕ್ಷ ವೀರಪ್ಪಗೌಡ ಕಣ್ಕಲ್  ಪ್ರಾಸ್ತಾವಿಕವಾಗಿ ಮಾತನಾಡಿದರು.  ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ 103ನೇ ಬಾರಿ ರಕ್ತದಾನ ಮಾಡುತ್ತಿರುವ  ಶೈಲೇಶ್ ಅಂಬೆ ಕಲ್ಲು ಅವರನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಗುರುಪ್ರಸಾದ್, ಚಿರಾಯು ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷರಾದ ಪ್ರವೀಣ್ ಮಾವಿನಕಟ್ಟೆ, ಅಮರ ಸಂಘಟನಾ ಸಮಿತಿಯ ಅಧ್ಯಕ್ಷರಾದ  ಸಾತ್ವಿಕ್ ಮಡಪ್ಪಾಡಿ, ಲಯನ್ಸ್ ಕಾರ್ಯದರ್ಶಿ ಲಯನ್ ದೊಡ್ಡಣ್ಣ ಬರೆಮೇಲು, ಪಂಚಾಯತ್ ಸದಸ್ಯರುಗಳ ಜಿಲ್ಲಾಧ್ಯಕ್ಷರಾದ ಹರೀಶ್ ರೈ ಉಬರಡ್ಕ ,ಪಂಚಾಯತ್ ಸದಸ್ಯರುಗಳಾದ ಪ್ರಶಾಂತ್ ಮೆದು ಹಾಗೂ ದುರ್ಗಾದಾಸ್ ಮೆತ್ತಡ್ಕ  ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರವೀಣ್  ವಂದಿಸಿದರು. ರಾಜೇಶ್  ಕಾರ್ಯಕ್ರಮ ನಿರೂಪಣೆ ಮಾಡಿದರು.

ರಕ್ತದಾನ ಶಿಬಿರದಲ್ಲಿ ಒಟ್ಟು 47 ಜನ ರಕ್ತದಾನ ಮಾಡಿದ್ದು ಶೈಲೇಶ್ ಅಂಬೇಕಲ್ಲು 103ನೇ ಬಾರಿ ರಕ್ತದಾನ ಮಾಡಿದರೆ ರಾಜೇಶ್ ರವರು 60ನೇ ಬಾರಿ ರಕ್ತದಾನ ಮಾಡಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ

ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…

2 hours ago

ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |

ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…

21 hours ago

ಆಧುನಿಕ ಯುಗದಲ್ಲಿ ತಂತ್ರಜ್ಞ ದಲ್ಲಾಳಿಗಳು

ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…

1 day ago

ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |

ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…

2 days ago

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…

2 days ago

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆ | 800 ಕ್ಕೂ ಅಧಿಕ ವಿದ್ಯುತ್‌ ಕಂಬಗಳಿಗೆ ಹಾನಿ – ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…

2 days ago