ಗ್ರಾಮ ಪಂಚಾಯತ್ ದೇವಚಳ್ಳ, ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಇಲಾಖೆ ,ಭಾರತೀಯ ಅಂಚೆ ಇಲಾಖೆ ಪುತ್ತೂರು ,ಚಿರಾಯು ಸ್ಪೋರ್ಟ್ಸ ಕ್ಲಬ್ ಮಾವಿನಕಟ್ಟೆ ,ಅಮರ ಸಂಘಟನಾ ಸಮಿತಿ ರಿಜಿಸ್ಟರ್ ಸುಳ್ಯ, ಗ್ರಾಮವನ್ ಮಾವಿನಕಟ್ಟೆ ,ಮತ್ತು ಒಡಿಯೂರು ಸ್ವಸಹಾಯ ಸಂಘ ದೇವಚಳ್ಳ ಇವರುಗಳ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ,ಆರೋಗ್ಯ ತಪಾಸಣಾ ಶಿಬಿರ, ಆಧಾರ ಕಾರ್ಡು ಪರಿಷ್ಕರಣೆ ,ಈ ಶ್ರಮ ಕಾರ್ಡ್ ನೋಂದಣಿ ಮತ್ತು ಹಿರಿಯರ ಗುರುತು ಚೀಟಿ ನೋಂದಣಿ ಕಾರ್ಯಕ್ರಮವು ದೇವಚಳ್ಳ ಗ್ರಾಮ ಪಂಚಾಯತ್ ವಠಾರದಲ್ಲಿ ಜರುಗಿತು.
ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿ ಡಾ. ಕುಲದೀಪ್ ದೀಪ ಬೆಳಗಿಸಿ ಉದ್ಘಾಟಿಸಿದರು. ಪುತ್ತೂರು ರೋಟರಿ ಕ್ಲಬ್ಬಿನ ಅಧ್ಯಕ್ಷರು ಬ್ಲಡ್ ಬ್ಯಾಂಕಿನ ಮುಖ್ಯಸ್ಥ ಜಯರಾಜ್ ಭಂಡಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಸುಳ್ಯ ಲಯನ್ಸ್ ಕ್ಲಬ್ ನ ಅಧ್ಯಕ್ಷ ವೀರಪ್ಪಗೌಡ ಕಣ್ಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ 103ನೇ ಬಾರಿ ರಕ್ತದಾನ ಮಾಡುತ್ತಿರುವ ಶೈಲೇಶ್ ಅಂಬೆ ಕಲ್ಲು ಅವರನ್ನು ಸನ್ಮಾನಿಸಲಾಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್, ಚಿರಾಯು ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷರಾದ ಪ್ರವೀಣ್ ಮಾವಿನಕಟ್ಟೆ, ಅಮರ ಸಂಘಟನಾ ಸಮಿತಿಯ ಅಧ್ಯಕ್ಷರಾದ ಸಾತ್ವಿಕ್ ಮಡಪ್ಪಾಡಿ, ಲಯನ್ಸ್ ಕಾರ್ಯದರ್ಶಿ ಲಯನ್ ದೊಡ್ಡಣ್ಣ ಬರೆಮೇಲು, ಪಂಚಾಯತ್ ಸದಸ್ಯರುಗಳ ಜಿಲ್ಲಾಧ್ಯಕ್ಷರಾದ ಹರೀಶ್ ರೈ ಉಬರಡ್ಕ ,ಪಂಚಾಯತ್ ಸದಸ್ಯರುಗಳಾದ ಪ್ರಶಾಂತ್ ಮೆದು ಹಾಗೂ ದುರ್ಗಾದಾಸ್ ಮೆತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರವೀಣ್ ವಂದಿಸಿದರು. ರಾಜೇಶ್ ಕಾರ್ಯಕ್ರಮ ನಿರೂಪಣೆ ಮಾಡಿದರು.
ರಕ್ತದಾನ ಶಿಬಿರದಲ್ಲಿ ಒಟ್ಟು 47 ಜನ ರಕ್ತದಾನ ಮಾಡಿದ್ದು ಶೈಲೇಶ್ ಅಂಬೇಕಲ್ಲು 103ನೇ ಬಾರಿ ರಕ್ತದಾನ ಮಾಡಿದರೆ ರಾಜೇಶ್ ರವರು 60ನೇ ಬಾರಿ ರಕ್ತದಾನ ಮಾಡಿದರು.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…