Advertisement
ಸುದ್ದಿಗಳು

ದೇವಚಳ್ಳ | ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

Share

ಗ್ರಾಮ ಪಂಚಾಯತ್ ದೇವಚಳ್ಳ, ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಇಲಾಖೆ ,ಭಾರತೀಯ ಅಂಚೆ ಇಲಾಖೆ ಪುತ್ತೂರು ,ಚಿರಾಯು ಸ್ಪೋರ್ಟ್ಸ ಕ್ಲಬ್ ಮಾವಿನಕಟ್ಟೆ ,ಅಮರ ಸಂಘಟನಾ ಸಮಿತಿ ರಿಜಿಸ್ಟರ್ ಸುಳ್ಯ, ಗ್ರಾಮವನ್ ಮಾವಿನಕಟ್ಟೆ ,ಮತ್ತು ಒಡಿಯೂರು ಸ್ವಸಹಾಯ ಸಂಘ ದೇವಚಳ್ಳ ಇವರುಗಳ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ,ಆರೋಗ್ಯ ತಪಾಸಣಾ ಶಿಬಿರ, ಆಧಾರ ಕಾರ್ಡು ಪರಿಷ್ಕರಣೆ ,ಈ ಶ್ರಮ ಕಾರ್ಡ್ ನೋಂದಣಿ ಮತ್ತು ಹಿರಿಯರ ಗುರುತು ಚೀಟಿ ನೋಂದಣಿ ಕಾರ್ಯಕ್ರಮವು ದೇವಚಳ್ಳ ಗ್ರಾಮ ಪಂಚಾಯತ್ ವಠಾರದಲ್ಲಿ ಜರುಗಿತು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿ  ಡಾ. ಕುಲದೀಪ್  ದೀಪ ಬೆಳಗಿಸಿ ಉದ್ಘಾಟಿಸಿದರು. ಪುತ್ತೂರು ರೋಟರಿ ಕ್ಲಬ್ಬಿನ ಅಧ್ಯಕ್ಷರು ಬ್ಲಡ್ ಬ್ಯಾಂಕಿನ ಮುಖ್ಯಸ್ಥ ಜಯರಾಜ್ ಭಂಡಾರಿ  ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಸುಳ್ಯ ಲಯನ್ಸ್ ಕ್ಲಬ್ ನ ಅಧ್ಯಕ್ಷ ವೀರಪ್ಪಗೌಡ ಕಣ್ಕಲ್  ಪ್ರಾಸ್ತಾವಿಕವಾಗಿ ಮಾತನಾಡಿದರು.  ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ 103ನೇ ಬಾರಿ ರಕ್ತದಾನ ಮಾಡುತ್ತಿರುವ  ಶೈಲೇಶ್ ಅಂಬೆ ಕಲ್ಲು ಅವರನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಗುರುಪ್ರಸಾದ್, ಚಿರಾಯು ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷರಾದ ಪ್ರವೀಣ್ ಮಾವಿನಕಟ್ಟೆ, ಅಮರ ಸಂಘಟನಾ ಸಮಿತಿಯ ಅಧ್ಯಕ್ಷರಾದ  ಸಾತ್ವಿಕ್ ಮಡಪ್ಪಾಡಿ, ಲಯನ್ಸ್ ಕಾರ್ಯದರ್ಶಿ ಲಯನ್ ದೊಡ್ಡಣ್ಣ ಬರೆಮೇಲು, ಪಂಚಾಯತ್ ಸದಸ್ಯರುಗಳ ಜಿಲ್ಲಾಧ್ಯಕ್ಷರಾದ ಹರೀಶ್ ರೈ ಉಬರಡ್ಕ ,ಪಂಚಾಯತ್ ಸದಸ್ಯರುಗಳಾದ ಪ್ರಶಾಂತ್ ಮೆದು ಹಾಗೂ ದುರ್ಗಾದಾಸ್ ಮೆತ್ತಡ್ಕ  ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರವೀಣ್  ವಂದಿಸಿದರು. ರಾಜೇಶ್  ಕಾರ್ಯಕ್ರಮ ನಿರೂಪಣೆ ಮಾಡಿದರು.

ರಕ್ತದಾನ ಶಿಬಿರದಲ್ಲಿ ಒಟ್ಟು 47 ಜನ ರಕ್ತದಾನ ಮಾಡಿದ್ದು ಶೈಲೇಶ್ ಅಂಬೇಕಲ್ಲು 103ನೇ ಬಾರಿ ರಕ್ತದಾನ ಮಾಡಿದರೆ ರಾಜೇಶ್ ರವರು 60ನೇ ಬಾರಿ ರಕ್ತದಾನ ಮಾಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago