ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯಿಂದ ಜನಾನುರಾಗಿ ವೈದ್ಯ ಡಾ.ಪಿಜಿಎಸ್ ಪ್ರಕಾಶ್ ಅವರ ಸಂಸ್ಮರಣೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಸಹಭಾಗಿತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಡಾ.ಶಶಿಧರ ಪಡೀಲು ದೀಪಬೆಳಗಿಸಿ ಉದ್ಘಾಟಿಸಿ , ಡಾ.ಪಿಜಿಎಸ್ ಪ್ರಕಾಶ್ ಅವರ ಜನಸೇವೆ ಹಾಗೂ ಜನಪರವಾದ ಕಾಳಜಿಯ ಬಗ್ಗೆ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಯು ವಹಿಸಿದ್ದರು. ಹಿರಿಯ ತರಬೇತಿ ಅಧಿಕಾರಿ ಮೋಹನಚಂದ್ರ ಪಂಜಿಗಾರು ಸಂಸ್ಮರಣಾ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಲತಾಶಂಕರಿ , ದೇವತಾರಾಧನಾ ಸಮಿತಿ ಅಧ್ಯಕ್ಷ ಸೇಸಪ್ಪ ಪರವ, ಮಹಿಳಾ ಸಮಿತಿ ಅಧ್ಯಕ್ಷೆ ಕಮಲ ಉಪಸ್ಥಿತರಿದ್ದರು.
ಯಶೋಧಾ ಪೊಸೋಡು ಪ್ರಾರ್ಥಿಸಿದರು. ಸುಧಾಕರ ರೈ ಸ್ವಾಗತಿಸಿದರು. ಜಾಹ್ನವಿ ಕಾಂಚೋಡು ವಂದಿಸಿದರು. ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…