ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯಿಂದ ಜನಾನುರಾಗಿ ವೈದ್ಯ ಡಾ.ಪಿಜಿಎಸ್ ಪ್ರಕಾಶ್ ಅವರ ಸಂಸ್ಮರಣೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಸಹಭಾಗಿತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಡಾ.ಶಶಿಧರ ಪಡೀಲು ದೀಪಬೆಳಗಿಸಿ ಉದ್ಘಾಟಿಸಿ , ಡಾ.ಪಿಜಿಎಸ್ ಪ್ರಕಾಶ್ ಅವರ ಜನಸೇವೆ ಹಾಗೂ ಜನಪರವಾದ ಕಾಳಜಿಯ ಬಗ್ಗೆ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಯು ವಹಿಸಿದ್ದರು. ಹಿರಿಯ ತರಬೇತಿ ಅಧಿಕಾರಿ ಮೋಹನಚಂದ್ರ ಪಂಜಿಗಾರು ಸಂಸ್ಮರಣಾ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಲತಾಶಂಕರಿ , ದೇವತಾರಾಧನಾ ಸಮಿತಿ ಅಧ್ಯಕ್ಷ ಸೇಸಪ್ಪ ಪರವ, ಮಹಿಳಾ ಸಮಿತಿ ಅಧ್ಯಕ್ಷೆ ಕಮಲ ಉಪಸ್ಥಿತರಿದ್ದರು.
ಯಶೋಧಾ ಪೊಸೋಡು ಪ್ರಾರ್ಥಿಸಿದರು. ಸುಧಾಕರ ರೈ ಸ್ವಾಗತಿಸಿದರು. ಜಾಹ್ನವಿ ಕಾಂಚೋಡು ವಂದಿಸಿದರು. ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…
ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…
ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…
ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…