ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯಿಂದ ಜನಾನುರಾಗಿ ವೈದ್ಯ ಡಾ.ಪಿಜಿಎಸ್ ಪ್ರಕಾಶ್ ಅವರ ಸಂಸ್ಮರಣೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಸಹಭಾಗಿತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಡಾ.ಶಶಿಧರ ಪಡೀಲು ದೀಪಬೆಳಗಿಸಿ ಉದ್ಘಾಟಿಸಿ , ಡಾ.ಪಿಜಿಎಸ್ ಪ್ರಕಾಶ್ ಅವರ ಜನಸೇವೆ ಹಾಗೂ ಜನಪರವಾದ ಕಾಳಜಿಯ ಬಗ್ಗೆ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಯು ವಹಿಸಿದ್ದರು. ಹಿರಿಯ ತರಬೇತಿ ಅಧಿಕಾರಿ ಮೋಹನಚಂದ್ರ ಪಂಜಿಗಾರು ಸಂಸ್ಮರಣಾ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಲತಾಶಂಕರಿ , ದೇವತಾರಾಧನಾ ಸಮಿತಿ ಅಧ್ಯಕ್ಷ ಸೇಸಪ್ಪ ಪರವ, ಮಹಿಳಾ ಸಮಿತಿ ಅಧ್ಯಕ್ಷೆ ಕಮಲ ಉಪಸ್ಥಿತರಿದ್ದರು.
ಯಶೋಧಾ ಪೊಸೋಡು ಪ್ರಾರ್ಥಿಸಿದರು. ಸುಧಾಕರ ರೈ ಸ್ವಾಗತಿಸಿದರು. ಜಾಹ್ನವಿ ಕಾಂಚೋಡು ವಂದಿಸಿದರು. ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…