ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯಿಂದ ಜನಾನುರಾಗಿ ವೈದ್ಯ ಡಾ.ಪಿಜಿಎಸ್ ಪ್ರಕಾಶ್ ಅವರ ಸಂಸ್ಮರಣೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಸಹಭಾಗಿತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಡಾ.ಶಶಿಧರ ಪಡೀಲು ದೀಪಬೆಳಗಿಸಿ ಉದ್ಘಾಟಿಸಿ , ಡಾ.ಪಿಜಿಎಸ್ ಪ್ರಕಾಶ್ ಅವರ ಜನಸೇವೆ ಹಾಗೂ ಜನಪರವಾದ ಕಾಳಜಿಯ ಬಗ್ಗೆ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಬಾಳಿಲ ಮುಪ್ಪೇರ್ಯ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಯು ವಹಿಸಿದ್ದರು. ಹಿರಿಯ ತರಬೇತಿ ಅಧಿಕಾರಿ ಮೋಹನಚಂದ್ರ ಪಂಜಿಗಾರು ಸಂಸ್ಮರಣಾ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಲತಾಶಂಕರಿ , ದೇವತಾರಾಧನಾ ಸಮಿತಿ ಅಧ್ಯಕ್ಷ ಸೇಸಪ್ಪ ಪರವ, ಮಹಿಳಾ ಸಮಿತಿ ಅಧ್ಯಕ್ಷೆ ಕಮಲ ಉಪಸ್ಥಿತರಿದ್ದರು.
ಯಶೋಧಾ ಪೊಸೋಡು ಪ್ರಾರ್ಥಿಸಿದರು. ಸುಧಾಕರ ರೈ ಸ್ವಾಗತಿಸಿದರು. ಜಾಹ್ನವಿ ಕಾಂಚೋಡು ವಂದಿಸಿದರು. ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…