ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗದ ವತಿಯಿಂದ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ತದಾನ ಶಿಬಿರ ಅಭಿಯಾನದ ಸಮಾರೋಪ ಸಮಾರಂಭ ಅ. 2 ರ ಗಾಂಧಿ ಜಯಂತಿಯಂದು ಮಂಗಳೂರಿನ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಜರುಗಲಿದೆ ಎಂದು ದ.ಕ ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಸಮಿತಿ ತಿಳಿಸಿದೆ.
ಬೆಳಿಗ್ಗೆ 9 ಗಂಟೆಗೆ ಪ್ಲಾಸ್ಮಾ ಹಾಗೂ ರಕ್ತದಾನಿಗಳ ಸಂಗಮ ನಡೆಯಲಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಏನಪೊಯ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಮದ್ಯಾಹ್ನ 2:30 ಗಂಟೆಗೆ ರಕ್ತದಾನ ಅಭಿಯಾನದ ಸಮಾರೋಪ ಸಮಾರಂಭ ನಡೆಯಲಿದ್ದು, ದ.ಕ ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷರಾದ ಸಯ್ಯಿದ್ ಅಮೀರ್ ತಂಙಳ್ ಕಿನ್ಯ ದುಃವಾ ನೇತೃತ್ವ ನೀಡಲಿದ್ದಾರೆ. ಶೈಖುನಾ ಮಿತ್ತಬೈಲು ಉಸ್ತಾದರ ಸುಪುತ್ರ ಬಹು ಇರ್ಷಾದ್ ದಾರಿಮಿ ಅಲ್ ಜಝ್ಹರಿ ಕಾರ್ಯಕ್ರಮವನ್ನು ಉಧ್ಘಾಟಿಸಲಿದ್ದಾರೆ. ಎಸ್ ಕೆ ಎಸ್ ಎಸ್ ಎಫ್ ವಿಖಾಯ ಜಿಲ್ಲಾ ಚೇರ್ಮನ್ ಸಯ್ಯಿದ್ ಇಸ್ಮಾಯಿಲ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಡಾಟರಾಜೇಂದ್ರ ಕೆ.ವಿ.ಭಾಗವಹಿಸಲಿದ್ದಾರೆ.
ದ.ಕ,ಜಿಲ್ಲಾ ಪಂಚಾಯತ್ ಸಿ.ಇ. ಓ ಡಾ, ಸೆಲ್ವಮಣಿ, ಶಾಸಕರಾದ ಯು.ಟಿ ಖಾದರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ ರಾಮಚಂದ್ರ ಬಾಯರಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಎಸ್ ಕೆ ಎಸ್ ಎಸ್ ಎಫ್ ವಿಖಾಯ ದ.ಕ.ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…