ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗದ ವತಿಯಿಂದ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ತದಾನ ಶಿಬಿರ ಅಭಿಯಾನದ ಸಮಾರೋಪ ಸಮಾರಂಭ ಅ. 2 ರ ಗಾಂಧಿ ಜಯಂತಿಯಂದು ಮಂಗಳೂರಿನ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಜರುಗಲಿದೆ ಎಂದು ದ.ಕ ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಸಮಿತಿ ತಿಳಿಸಿದೆ.
ಬೆಳಿಗ್ಗೆ 9 ಗಂಟೆಗೆ ಪ್ಲಾಸ್ಮಾ ಹಾಗೂ ರಕ್ತದಾನಿಗಳ ಸಂಗಮ ನಡೆಯಲಿದ್ದು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಏನಪೊಯ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಮದ್ಯಾಹ್ನ 2:30 ಗಂಟೆಗೆ ರಕ್ತದಾನ ಅಭಿಯಾನದ ಸಮಾರೋಪ ಸಮಾರಂಭ ನಡೆಯಲಿದ್ದು, ದ.ಕ ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷರಾದ ಸಯ್ಯಿದ್ ಅಮೀರ್ ತಂಙಳ್ ಕಿನ್ಯ ದುಃವಾ ನೇತೃತ್ವ ನೀಡಲಿದ್ದಾರೆ. ಶೈಖುನಾ ಮಿತ್ತಬೈಲು ಉಸ್ತಾದರ ಸುಪುತ್ರ ಬಹು ಇರ್ಷಾದ್ ದಾರಿಮಿ ಅಲ್ ಜಝ್ಹರಿ ಕಾರ್ಯಕ್ರಮವನ್ನು ಉಧ್ಘಾಟಿಸಲಿದ್ದಾರೆ. ಎಸ್ ಕೆ ಎಸ್ ಎಸ್ ಎಫ್ ವಿಖಾಯ ಜಿಲ್ಲಾ ಚೇರ್ಮನ್ ಸಯ್ಯಿದ್ ಇಸ್ಮಾಯಿಲ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾಧಿಕಾರಿ ಡಾಟರಾಜೇಂದ್ರ ಕೆ.ವಿ.ಭಾಗವಹಿಸಲಿದ್ದಾರೆ.
ದ.ಕ,ಜಿಲ್ಲಾ ಪಂಚಾಯತ್ ಸಿ.ಇ. ಓ ಡಾ, ಸೆಲ್ವಮಣಿ, ಶಾಸಕರಾದ ಯು.ಟಿ ಖಾದರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ ರಾಮಚಂದ್ರ ಬಾಯರಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಎಸ್ ಕೆ ಎಸ್ ಎಸ್ ಎಫ್ ವಿಖಾಯ ದ.ಕ.ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…