ಸಾಧನೆ

ರಕ್ತದಾನ ಸಾಧನೆಗಾಗಿ ರಾಜ್ಯ ಮಟ್ಟದ ಗೌರವ ಪಡೆದ ಸಂಜೀವ ಕುದ್ಪಾಜೆ | ರಕ್ತದಾನಿ, ಪರಿಸರ ಪ್ರೇಮಿ, ಸಮಾಜಮುಖಿ, ಸರಳಜೀವಿ ಸಂಜೀವ ಕುದ್ಪಾಜೆ |

Share

ಸಂಜೀವ್ ಕುದ್ಪಾಜೆ ಅವರಿಗೆ ವಿಶ್ವ ರಕ್ತದಾನಿಗಳ ದಿನದಂದು ಬೆಂಗಳೂರಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ, ಅವರು ಮಾಡಿದ ರಕ್ತದಾನ ಮಹೋನ್ನತ ಸಾಧನೆಗಾಗಿ ರಾಜ್ಯಮಟ್ಟದ ಗೌರವವನ್ನು ನೀಡಿ ಸನ್ಮಾನಿಸಿದೆ. ಇವರು  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುತ್ತಿರುವ  ಸಮಾಜಮುಖಿ, ಸರಳ ಜೀವಿ. ಎನ್ಎಂಸಿ ಕಾಲೇಜಿನ ಯೂತ್ ರೆಡ್ ಕ್ರಾಸ್ ಯುನಿಟ್ ನ ಪ್ರೋಗ್ರಾಮ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

Advertisement

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕಿನ ಸಕ್ರಿಯ ನಿರ್ದೇಶಕರಾದ ಸಂಜೀವ ಕುದ್ಪಾಜೆ  ರಾಜ್ಯಮಟ್ಟದ ರಕ್ತದಾನಿಯಾಗಿ ಗುರುತಿಸಿಕೊಂಡಿದ್ದು, ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ಜಿಲ್ಲೆಯಾದ್ಯಂತ ರಕ್ತದಾನಿಗಳನ್ನು ಸಂಘಟಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅಲ್ಲದೆ ಕಾಲೇಜು ವಿದ್ಯಾರ್ಥಿಗಳಿಗೆ ರಕ್ತದಾನ ಮಾಡುವಂತೆ ಹುರಿದುಂಬಿಸುತ್ತಿದ್ದಾರೆ. ಅನೇಕ ಕಠಿಣ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಂದ ರಕ್ತದಾನ ಮಾಡಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಅದಲ್ಲದೆ ಸ್ವತಃ ಇವರೇ ರಕ್ತದಾನಿಯಾಗಿದ್ದು ಸುಮಾರು 28 ಬಾರಿ ರಕ್ತದಾನ ಮಾಡಿ ಅನೇಕರಿಗೆ ಜೀವದಾನ ನೀಡಿದ್ದಾರೆ.

ಸುಮಾರು 26 ವರ್ಷಗಳಿಂದ ಎನ್ ಎಸ್ ಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕುದ್ಪಾಜೆಯವರು, ತಮ್ಮ ಕಾಲೇಜಿನ 25ನೇ ಕ್ಯಾಂಪಿನ ಮುಂದಾಳತ್ವವನ್ನು ಇದೇ ತಿಂಗಳು ವಹಿಸಿಕೊಳ್ಳಲಿದ್ದಾರೆ. ಈ ಮೂಲಕ ಅನೇಕ ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಿದ್ದಾರೆ. ಇದರ ಜೊತೆಗೆ ರೋಟರಿ ಕ್ಲಬ್ ನಲ್ಲಿ 22 ವರ್ಷಗಳಿಂದ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಕುದ್ಪಾಜೆಯವರು, ಅಧ್ಯಕ್ಷರಾಗಿದ್ದ ವೇಳೆ ಬಳ್ಪ ಗ್ರಾಮಕ್ಕೆ 8 ಲಕ್ಷ ವೆಚ್ಚದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಮೂಲಕ, ರೋಟರಿ, ಜಿಲ್ಲೆಯ ಅತ್ಯುತ್ತಮ ಸಮಾಜ ಸೇವಕ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಮರ ಸುಳ್ಯ ರಮಣೀಯ ಸುಳ್ಯ ಎಂಬ ನಗರ ಪಂಚಾಯತ್ ಸಹಭಾಗಿತ್ವದಲ್ಲಿ ಪ್ರತಿ ಗುರುವಾರ ನಡೆಯುವ ಸ್ವಚ್ಚತಾ ಕಾರ್ಯಕ್ರಮದಲ್ಲೂ ಕೈ ಜೋಡಿಸಿದ್ದಾರೆ.

ಜನಸಾಮಾನ್ಯರಿಗೆ ಅತ್ಯಂತ ಅನುಕೂಲ ಆಗುವಂತಹ ಹಣ್ಣು, ತರಕಾರಿ, ಜೇನು, ಅಣಬೆ, ಗಿಡ ಮತ್ತು ಬೀಜ ವಿನಿಮಯ ಇತ್ಯಾದಿ 25ಕ್ಕೂ ಹೆಚ್ಚು ವಿವಿಧ ಉಪಯುಕ್ತ ವಾಟ್ಸಾಪ್ ಗುಂಪು ರಚಿಸಿ, ಜನರನ್ನು ಒಗ್ಗೂಡಿಸಿ `ಮರಳಿ ಪರಿಸರಕ್ಕೆ ಬನ್ನಿ’ಎನ್ನುವ ಸಂದೇಶ ಸಾರುತ್ತಿದ್ದಾರೆ. ತಮ್ಮ ಮನೆಯಲ್ಲೂ ನೂರಾರು ಬಗೆಯ ಕಳ್ಳಿ ಗಿಡಗಳು, ಜೇನು ಸಾಕಾಣಿಕೆ, ವಿವಿಧ ಹಣ್ಣು, ಹೂವಿನ ಗಿಡಗಳಿಗೆ ಕಸಿ ಕಟ್ಟುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಪತ್ನಿ ಮುಖ್ಯಶಿಕ್ಷಕಿ ಧನಲಕ್ಷಿ ಕುದ್ಪಾಜೆ ಹಾಗೂ ಮಕ್ಕಳ ಸಹಕಾರದಿಂದ ಸಮಾಜಮುಖಿ ಕಾರ್ಯವನ್ನು ಮಾಡುತ್ತಿರುವ  ಸಂಜೀವ್ ಕುದ್ಪಾಜೆ ಅವರ  ಸೇವೆ ಒಂದಷ್ಟು ಮಂದಿಗೆ ಪ್ರೇರಣೆಯಾಗಿದೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.

4 hours ago

ವೃಶ್ಚಿಕ ರಾಶಿ ಯುಗಾದಿ ಸಂವತ್ಸರದ ಫಲಗಳು | ಹೇಗಿದೆ ಈ ವರ್ಷ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

5 hours ago

ದೇವಸ್ಥಾನದ ಬ್ರಹ್ಮಕಲಶೋತ್ಸವಗಳಲ್ಲಿ “ರಾಜಕೀಯದ ಚಪ್ಪಲು” ಹೊರಗಿಡಬೇಕು |

ಒಂದು ದೇವಸ್ಥಾನದ ಎಂದರೆ ಶ್ರದ್ಧೆಯ ಕೇಂದ್ರ, ಒಂದು ಊರಿನ ದೇವಸ್ಥಾನ ಎಂದರೆ ಸೌಹಾದರ್ತೆಯ…

5 hours ago

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

13 hours ago

ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…

15 hours ago