Advertisement
ಸಾಧನೆ

ರಕ್ತದಾನ ಸಾಧನೆಗಾಗಿ ರಾಜ್ಯ ಮಟ್ಟದ ಗೌರವ ಪಡೆದ ಸಂಜೀವ ಕುದ್ಪಾಜೆ | ರಕ್ತದಾನಿ, ಪರಿಸರ ಪ್ರೇಮಿ, ಸಮಾಜಮುಖಿ, ಸರಳಜೀವಿ ಸಂಜೀವ ಕುದ್ಪಾಜೆ |

Share

ಸಂಜೀವ್ ಕುದ್ಪಾಜೆ ಅವರಿಗೆ ವಿಶ್ವ ರಕ್ತದಾನಿಗಳ ದಿನದಂದು ಬೆಂಗಳೂರಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ, ಅವರು ಮಾಡಿದ ರಕ್ತದಾನ ಮಹೋನ್ನತ ಸಾಧನೆಗಾಗಿ ರಾಜ್ಯಮಟ್ಟದ ಗೌರವವನ್ನು ನೀಡಿ ಸನ್ಮಾನಿಸಿದೆ. ಇವರು  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುತ್ತಿರುವ  ಸಮಾಜಮುಖಿ, ಸರಳ ಜೀವಿ. ಎನ್ಎಂಸಿ ಕಾಲೇಜಿನ ಯೂತ್ ರೆಡ್ ಕ್ರಾಸ್ ಯುನಿಟ್ ನ ಪ್ರೋಗ್ರಾಮ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕಿನ ಸಕ್ರಿಯ ನಿರ್ದೇಶಕರಾದ ಸಂಜೀವ ಕುದ್ಪಾಜೆ  ರಾಜ್ಯಮಟ್ಟದ ರಕ್ತದಾನಿಯಾಗಿ ಗುರುತಿಸಿಕೊಂಡಿದ್ದು, ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ಜಿಲ್ಲೆಯಾದ್ಯಂತ ರಕ್ತದಾನಿಗಳನ್ನು ಸಂಘಟಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅಲ್ಲದೆ ಕಾಲೇಜು ವಿದ್ಯಾರ್ಥಿಗಳಿಗೆ ರಕ್ತದಾನ ಮಾಡುವಂತೆ ಹುರಿದುಂಬಿಸುತ್ತಿದ್ದಾರೆ. ಅನೇಕ ಕಠಿಣ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಂದ ರಕ್ತದಾನ ಮಾಡಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಅದಲ್ಲದೆ ಸ್ವತಃ ಇವರೇ ರಕ್ತದಾನಿಯಾಗಿದ್ದು ಸುಮಾರು 28 ಬಾರಿ ರಕ್ತದಾನ ಮಾಡಿ ಅನೇಕರಿಗೆ ಜೀವದಾನ ನೀಡಿದ್ದಾರೆ.

ಸುಮಾರು 26 ವರ್ಷಗಳಿಂದ ಎನ್ ಎಸ್ ಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕುದ್ಪಾಜೆಯವರು, ತಮ್ಮ ಕಾಲೇಜಿನ 25ನೇ ಕ್ಯಾಂಪಿನ ಮುಂದಾಳತ್ವವನ್ನು ಇದೇ ತಿಂಗಳು ವಹಿಸಿಕೊಳ್ಳಲಿದ್ದಾರೆ. ಈ ಮೂಲಕ ಅನೇಕ ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಿದ್ದಾರೆ. ಇದರ ಜೊತೆಗೆ ರೋಟರಿ ಕ್ಲಬ್ ನಲ್ಲಿ 22 ವರ್ಷಗಳಿಂದ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಕುದ್ಪಾಜೆಯವರು, ಅಧ್ಯಕ್ಷರಾಗಿದ್ದ ವೇಳೆ ಬಳ್ಪ ಗ್ರಾಮಕ್ಕೆ 8 ಲಕ್ಷ ವೆಚ್ಚದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಮೂಲಕ, ರೋಟರಿ, ಜಿಲ್ಲೆಯ ಅತ್ಯುತ್ತಮ ಸಮಾಜ ಸೇವಕ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಮರ ಸುಳ್ಯ ರಮಣೀಯ ಸುಳ್ಯ ಎಂಬ ನಗರ ಪಂಚಾಯತ್ ಸಹಭಾಗಿತ್ವದಲ್ಲಿ ಪ್ರತಿ ಗುರುವಾರ ನಡೆಯುವ ಸ್ವಚ್ಚತಾ ಕಾರ್ಯಕ್ರಮದಲ್ಲೂ ಕೈ ಜೋಡಿಸಿದ್ದಾರೆ.

ಜನಸಾಮಾನ್ಯರಿಗೆ ಅತ್ಯಂತ ಅನುಕೂಲ ಆಗುವಂತಹ ಹಣ್ಣು, ತರಕಾರಿ, ಜೇನು, ಅಣಬೆ, ಗಿಡ ಮತ್ತು ಬೀಜ ವಿನಿಮಯ ಇತ್ಯಾದಿ 25ಕ್ಕೂ ಹೆಚ್ಚು ವಿವಿಧ ಉಪಯುಕ್ತ ವಾಟ್ಸಾಪ್ ಗುಂಪು ರಚಿಸಿ, ಜನರನ್ನು ಒಗ್ಗೂಡಿಸಿ `ಮರಳಿ ಪರಿಸರಕ್ಕೆ ಬನ್ನಿ’ಎನ್ನುವ ಸಂದೇಶ ಸಾರುತ್ತಿದ್ದಾರೆ. ತಮ್ಮ ಮನೆಯಲ್ಲೂ ನೂರಾರು ಬಗೆಯ ಕಳ್ಳಿ ಗಿಡಗಳು, ಜೇನು ಸಾಕಾಣಿಕೆ, ವಿವಿಧ ಹಣ್ಣು, ಹೂವಿನ ಗಿಡಗಳಿಗೆ ಕಸಿ ಕಟ್ಟುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಪತ್ನಿ ಮುಖ್ಯಶಿಕ್ಷಕಿ ಧನಲಕ್ಷಿ ಕುದ್ಪಾಜೆ ಹಾಗೂ ಮಕ್ಕಳ ಸಹಕಾರದಿಂದ ಸಮಾಜಮುಖಿ ಕಾರ್ಯವನ್ನು ಮಾಡುತ್ತಿರುವ  ಸಂಜೀವ್ ಕುದ್ಪಾಜೆ ಅವರ  ಸೇವೆ ಒಂದಷ್ಟು ಮಂದಿಗೆ ಪ್ರೇರಣೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago