ಸುದ್ದಿಗಳು

ಬಸ್ಸಿನಲ್ಲಿ ಲೇಡೀಸ್‌ ಸೀಟಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಗ್ಯಾರಂಟಿ….! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರಿನಲ್ಲಿ  ಬಿಎಂಟಿಸಿ (BMTC) ಬಸ್ಸಿನಲ್ಲಿ ಇನ್ನು ಮುಂದೆ ಲೇಡಿಸ್ ಸೀಟ್‍ನಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಬೀಳಲಿದೆ. ಈಗಾಗಲೇ 119 ಪುರುಷ ಪ್ರಯಾಣಿಕರಿಗೆ ಮಹಿಳೆಯರ ರಿಸರ್ವ್ ಸೀಟ್ ಬಳಕೆ ಮಾಡಿದಕ್ಕಾಗಿ 11,900 ರೂಪಾಯಿಗಳನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94ರ ಪ್ರಕಾರ ದಂಡ ವಿಧಿಸಲಾಗಿದೆ.

Advertisement

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‍ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆಗಸ್ಟ್‌ನಲ್ಲಿ 2,744 ಪ್ರಯಾಣಿಕರಿಂದ 4.62 ಲಕ್ಷ ರೂಪಾಯಿಗಳನ್ನು ದಂಡದ ಮೂಲಕ ಸಂಗ್ರಹಿಸಿದೆ. ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ ಹಾಗೂ ಸಂಸ್ಥೆಯ ಸಾರಿಗೆ ಆದಾಯ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ನಗರದಾದ್ಯಂತ ಆಗಸ್ಟ್‌ನಲ್ಲಿ 18,972 ಟ್ರಿಪ್‍ಗಳಲ್ಲಿ ತಪಾಸಣೆ ನಡೆಸಿತ್ತು. ಇದರಲ್ಲಿ 2,625 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ ಒಟ್ಟು 4.50 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.

ಟಿಕೆಟ್ ರಹಿತ ಪ್ರಯಾಣಿಕರು ಸಂಚಾರ ಮಾಡುತ್ತಿದ್ದ ಬಸ್‍ಗಳಲ್ಲಿ ಕರ್ತವ್ಯ ನಿರ್ಲಕ್ಷ್ಯ ಆಧಾರದ ಮೇಲೆ ನಿರ್ವಾಹಕರಗಳ ವಿರುದ್ಧವು ಕೂಡ 1,430 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಮಹಿಳೆಯರಿಗಾಗಿ ಮೀಸಲಿರಿಸಿದ್ದ ಸೀಟ್‍ಗಳಲ್ಲಿ ಕೂತು ಚೆಕ್ಕಿಂಗ್ ಸ್ಕ್ವಾಡ್ ಕೈಯಲ್ಲಿ ಸಿಕ್ಕಿ ಹಾಕಿಕೊಂಡವರ ಸಂಖ್ಯೆ ಕೂಡ ಕಡಿಮೆ ಇಲ್ಲ. ನಗರದಾದ್ಯಂತ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ ಪುರುಷ ಪ್ರಯಾಣಿಕರಿಗೂ ದಂಡದ ಬಿಸಿ ತಟ್ಟಿದೆ.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯ

ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ…

31 minutes ago

ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಚಿಂತನೆ

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ  ತಕ್ಷಣವೇ  ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ…

34 minutes ago

ಭಾರೀ ಮಳೆ | ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಎರಡು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ…

10 hours ago

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

18 hours ago

ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…

1 day ago

ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…

1 day ago