Advertisement
ಸುದ್ದಿಗಳು

ಬಸ್ಸಿನಲ್ಲಿ ಲೇಡೀಸ್‌ ಸೀಟಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಗ್ಯಾರಂಟಿ….! |

Share

ಬೆಂಗಳೂರಿನಲ್ಲಿ  ಬಿಎಂಟಿಸಿ (BMTC) ಬಸ್ಸಿನಲ್ಲಿ ಇನ್ನು ಮುಂದೆ ಲೇಡಿಸ್ ಸೀಟ್‍ನಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಬೀಳಲಿದೆ. ಈಗಾಗಲೇ 119 ಪುರುಷ ಪ್ರಯಾಣಿಕರಿಗೆ ಮಹಿಳೆಯರ ರಿಸರ್ವ್ ಸೀಟ್ ಬಳಕೆ ಮಾಡಿದಕ್ಕಾಗಿ 11,900 ರೂಪಾಯಿಗಳನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94ರ ಪ್ರಕಾರ ದಂಡ ವಿಧಿಸಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‍ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆಗಸ್ಟ್‌ನಲ್ಲಿ 2,744 ಪ್ರಯಾಣಿಕರಿಂದ 4.62 ಲಕ್ಷ ರೂಪಾಯಿಗಳನ್ನು ದಂಡದ ಮೂಲಕ ಸಂಗ್ರಹಿಸಿದೆ. ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ ಹಾಗೂ ಸಂಸ್ಥೆಯ ಸಾರಿಗೆ ಆದಾಯ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ನಗರದಾದ್ಯಂತ ಆಗಸ್ಟ್‌ನಲ್ಲಿ 18,972 ಟ್ರಿಪ್‍ಗಳಲ್ಲಿ ತಪಾಸಣೆ ನಡೆಸಿತ್ತು. ಇದರಲ್ಲಿ 2,625 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ ಒಟ್ಟು 4.50 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.

ಟಿಕೆಟ್ ರಹಿತ ಪ್ರಯಾಣಿಕರು ಸಂಚಾರ ಮಾಡುತ್ತಿದ್ದ ಬಸ್‍ಗಳಲ್ಲಿ ಕರ್ತವ್ಯ ನಿರ್ಲಕ್ಷ್ಯ ಆಧಾರದ ಮೇಲೆ ನಿರ್ವಾಹಕರಗಳ ವಿರುದ್ಧವು ಕೂಡ 1,430 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಮಹಿಳೆಯರಿಗಾಗಿ ಮೀಸಲಿರಿಸಿದ್ದ ಸೀಟ್‍ಗಳಲ್ಲಿ ಕೂತು ಚೆಕ್ಕಿಂಗ್ ಸ್ಕ್ವಾಡ್ ಕೈಯಲ್ಲಿ ಸಿಕ್ಕಿ ಹಾಕಿಕೊಂಡವರ ಸಂಖ್ಯೆ ಕೂಡ ಕಡಿಮೆ ಇಲ್ಲ. ನಗರದಾದ್ಯಂತ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ ಪುರುಷ ಪ್ರಯಾಣಿಕರಿಗೂ ದಂಡದ ಬಿಸಿ ತಟ್ಟಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

52 minutes ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 hour ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 hour ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

10 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

10 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

11 hours ago