Advertisement
ಸುದ್ದಿಗಳು

ಬಸ್ಸಿನಲ್ಲಿ ಲೇಡೀಸ್‌ ಸೀಟಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಗ್ಯಾರಂಟಿ….! |

Share

ಬೆಂಗಳೂರಿನಲ್ಲಿ  ಬಿಎಂಟಿಸಿ (BMTC) ಬಸ್ಸಿನಲ್ಲಿ ಇನ್ನು ಮುಂದೆ ಲೇಡಿಸ್ ಸೀಟ್‍ನಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಬೀಳಲಿದೆ. ಈಗಾಗಲೇ 119 ಪುರುಷ ಪ್ರಯಾಣಿಕರಿಗೆ ಮಹಿಳೆಯರ ರಿಸರ್ವ್ ಸೀಟ್ ಬಳಕೆ ಮಾಡಿದಕ್ಕಾಗಿ 11,900 ರೂಪಾಯಿಗಳನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94ರ ಪ್ರಕಾರ ದಂಡ ವಿಧಿಸಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‍ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆಗಸ್ಟ್‌ನಲ್ಲಿ 2,744 ಪ್ರಯಾಣಿಕರಿಂದ 4.62 ಲಕ್ಷ ರೂಪಾಯಿಗಳನ್ನು ದಂಡದ ಮೂಲಕ ಸಂಗ್ರಹಿಸಿದೆ. ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ ಹಾಗೂ ಸಂಸ್ಥೆಯ ಸಾರಿಗೆ ಆದಾಯ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ನಗರದಾದ್ಯಂತ ಆಗಸ್ಟ್‌ನಲ್ಲಿ 18,972 ಟ್ರಿಪ್‍ಗಳಲ್ಲಿ ತಪಾಸಣೆ ನಡೆಸಿತ್ತು. ಇದರಲ್ಲಿ 2,625 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ ಒಟ್ಟು 4.50 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.

Advertisement

ಟಿಕೆಟ್ ರಹಿತ ಪ್ರಯಾಣಿಕರು ಸಂಚಾರ ಮಾಡುತ್ತಿದ್ದ ಬಸ್‍ಗಳಲ್ಲಿ ಕರ್ತವ್ಯ ನಿರ್ಲಕ್ಷ್ಯ ಆಧಾರದ ಮೇಲೆ ನಿರ್ವಾಹಕರಗಳ ವಿರುದ್ಧವು ಕೂಡ 1,430 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಮಹಿಳೆಯರಿಗಾಗಿ ಮೀಸಲಿರಿಸಿದ್ದ ಸೀಟ್‍ಗಳಲ್ಲಿ ಕೂತು ಚೆಕ್ಕಿಂಗ್ ಸ್ಕ್ವಾಡ್ ಕೈಯಲ್ಲಿ ಸಿಕ್ಕಿ ಹಾಕಿಕೊಂಡವರ ಸಂಖ್ಯೆ ಕೂಡ ಕಡಿಮೆ ಇಲ್ಲ. ನಗರದಾದ್ಯಂತ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ ಪುರುಷ ಪ್ರಯಾಣಿಕರಿಗೂ ದಂಡದ ಬಿಸಿ ತಟ್ಟಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

20 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

21 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago