Advertisement
ಸುದ್ದಿಗಳು

ಬಸ್ಸಿನಲ್ಲಿ ಲೇಡೀಸ್‌ ಸೀಟಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಗ್ಯಾರಂಟಿ….! |

Share

ಬೆಂಗಳೂರಿನಲ್ಲಿ  ಬಿಎಂಟಿಸಿ (BMTC) ಬಸ್ಸಿನಲ್ಲಿ ಇನ್ನು ಮುಂದೆ ಲೇಡಿಸ್ ಸೀಟ್‍ನಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ಬೀಳಲಿದೆ. ಈಗಾಗಲೇ 119 ಪುರುಷ ಪ್ರಯಾಣಿಕರಿಗೆ ಮಹಿಳೆಯರ ರಿಸರ್ವ್ ಸೀಟ್ ಬಳಕೆ ಮಾಡಿದಕ್ಕಾಗಿ 11,900 ರೂಪಾಯಿಗಳನ್ನು ಮೋಟಾರು ವಾಹನ ಕಾಯ್ದೆ 1988ರ ಕಲಂ 177 ಮತ್ತು 94ರ ಪ್ರಕಾರ ದಂಡ ವಿಧಿಸಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್‍ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆಗಸ್ಟ್‌ನಲ್ಲಿ 2,744 ಪ್ರಯಾಣಿಕರಿಂದ 4.62 ಲಕ್ಷ ರೂಪಾಯಿಗಳನ್ನು ದಂಡದ ಮೂಲಕ ಸಂಗ್ರಹಿಸಿದೆ. ಬಿಎಂಟಿಸಿ ಬಸ್‍ನಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ ಹಾಗೂ ಸಂಸ್ಥೆಯ ಸಾರಿಗೆ ಆದಾಯ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ನಗರದಾದ್ಯಂತ ಆಗಸ್ಟ್‌ನಲ್ಲಿ 18,972 ಟ್ರಿಪ್‍ಗಳಲ್ಲಿ ತಪಾಸಣೆ ನಡೆಸಿತ್ತು. ಇದರಲ್ಲಿ 2,625 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ ಒಟ್ಟು 4.50 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.

ಟಿಕೆಟ್ ರಹಿತ ಪ್ರಯಾಣಿಕರು ಸಂಚಾರ ಮಾಡುತ್ತಿದ್ದ ಬಸ್‍ಗಳಲ್ಲಿ ಕರ್ತವ್ಯ ನಿರ್ಲಕ್ಷ್ಯ ಆಧಾರದ ಮೇಲೆ ನಿರ್ವಾಹಕರಗಳ ವಿರುದ್ಧವು ಕೂಡ 1,430 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಮಹಿಳೆಯರಿಗಾಗಿ ಮೀಸಲಿರಿಸಿದ್ದ ಸೀಟ್‍ಗಳಲ್ಲಿ ಕೂತು ಚೆಕ್ಕಿಂಗ್ ಸ್ಕ್ವಾಡ್ ಕೈಯಲ್ಲಿ ಸಿಕ್ಕಿ ಹಾಕಿಕೊಂಡವರ ಸಂಖ್ಯೆ ಕೂಡ ಕಡಿಮೆ ಇಲ್ಲ. ನಗರದಾದ್ಯಂತ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ ಪುರುಷ ಪ್ರಯಾಣಿಕರಿಗೂ ದಂಡದ ಬಿಸಿ ತಟ್ಟಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

41 minutes ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

2 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

3 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago