ಸುದ್ದಿಗಳು

5, 8ನೇ ತರಗತಿ ಬೋರ್ಡ್ ಪರೀಕ್ಷೆ | ‘ಹೈ’ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅನುದಾನರಹಿತ ಖಾಸಗಿ ಶಾಲೆಗಳ ಮೇಲ್ಮನವಿ | ಮಾರ್ಚ್ 27ಕ್ಕೆ ವಿಚಾರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳಿಂದ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ.

Advertisement
Advertisement

ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದರು. ಆದ್ರೆ ಸಿಜೆಐ ಡಿ.ವೈ. ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ. ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್​ಗೆ ಗೊತ್ತಿದೆ. ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ. ನಮ್ಮ ವಾದ ಆಲಿಸಬೇಕೆಂದು ಸಿಜಿಐ ಚಂದ್ರಚೂಡ್​ ಅವರಿಗೆ ವಕೀಲರಿಗೆ ಸೂಚಿಸಿದ್ದಾರೆ. ವಕೀಲರ ವಾದದ ಬಳಿಕ ಮಾರ್ಚ್ 27 ರಂದೇ ವಿಚಾರಣೆ ನಡೆಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿ 5 ಮತ್ತು 8ನೇ ತರಗತಿಯ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್​ನ ಏಕಸದಸ್ಯ ಪೀಠ ರದ್ದುಪಡಿಸಿತ್ತು.

ಬಳಿಕ ಇದರ ವಿರುದ್ಧ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ನಂತರ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್ ಅನುಮತಿ ನೀಡಿದ ಕಾರಣ ಮಾರ್ಚ್ 27ರಿಂದ  ಏಪ್ರಿಲ್ 1ರ ವರೆಗೆ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿತ್ತು. ಸದ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

5 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

7 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

9 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

10 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

10 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago