Advertisement
ಸುದ್ದಿಗಳು

5, 8ನೇ ತರಗತಿ ಬೋರ್ಡ್ ಪರೀಕ್ಷೆ | ‘ಹೈ’ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅನುದಾನರಹಿತ ಖಾಸಗಿ ಶಾಲೆಗಳ ಮೇಲ್ಮನವಿ | ಮಾರ್ಚ್ 27ಕ್ಕೆ ವಿಚಾರಣೆ

Share

5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳಿಂದ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ.

ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದರು. ಆದ್ರೆ ಸಿಜೆಐ ಡಿ.ವೈ. ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ. ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್​ಗೆ ಗೊತ್ತಿದೆ. ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ. ನಮ್ಮ ವಾದ ಆಲಿಸಬೇಕೆಂದು ಸಿಜಿಐ ಚಂದ್ರಚೂಡ್​ ಅವರಿಗೆ ವಕೀಲರಿಗೆ ಸೂಚಿಸಿದ್ದಾರೆ. ವಕೀಲರ ವಾದದ ಬಳಿಕ ಮಾರ್ಚ್ 27 ರಂದೇ ವಿಚಾರಣೆ ನಡೆಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿ 5 ಮತ್ತು 8ನೇ ತರಗತಿಯ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್​ನ ಏಕಸದಸ್ಯ ಪೀಠ ರದ್ದುಪಡಿಸಿತ್ತು.

ಬಳಿಕ ಇದರ ವಿರುದ್ಧ ಶಿಕ್ಷಣ ಇಲಾಖೆ ಮೇಲ್ಮನವಿ ಸಲ್ಲಿಸಿತ್ತು. ನಂತರ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್ ಅನುಮತಿ ನೀಡಿದ ಕಾರಣ ಮಾರ್ಚ್ 27ರಿಂದ  ಏಪ್ರಿಲ್ 1ರ ವರೆಗೆ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿತ್ತು. ಸದ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

16 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

16 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

17 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago