ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

May 26, 2023
1:11 PM

ಕಾಂತಾರ ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

ಸುಧೀರ್ ಅತ್ತಾವರ್  ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ.

ಕಬೀರ್ ಬೇಡ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾವ, ಬಾಲಿವುಡ್, ಹಾಲಿವುಡ್, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದಲ್ಲಿ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು  ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಸಿಗಲಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ
September 23, 2025
8:08 PM
by: The Rural Mirror ಸುದ್ದಿಜಾಲ
ಫೆ.21 “ಭಾವತೀರ ಯಾನ” ಸಿನಿಮಾ ಬಿಡುಗಡೆ | ಇಬ್ಬರು ಗೆಳೆಯರ ಭಾವಯಾನ | ಮಲೆನಾಡಿನಲ್ಲಿ ನಡೆದಿದೆ ಚಿತ್ರೀಕರಣ |
February 10, 2025
6:29 AM
by: The Rural Mirror ಸುದ್ದಿಜಾಲ
7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ
October 5, 2024
8:02 PM
by: ದ ರೂರಲ್ ಮಿರರ್.ಕಾಂ
ಗುಂಮ್ಟಿ.. ಬಣ್ಣ ಅಳಿಸಿ ಹೋಗುತ್ತಿರುವ ಒಂದು ಸಮುದಾಯದ ಕಥಾಹಂದರ | ಸಂದೇಶ್ ಶೆಟ್ಟಿ ನಿರ್ದೇಶನದ ಕಲಾತ್ಮಕ ಚಿತ್ರದ ಹಾಡು ಬಿಡುಗಡೆ
July 25, 2024
10:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror