Advertisement
ಸುದ್ದಿಗಳು

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

Share

ನಿಷೇಧಿತ ಗುಟ್ಕಾ ಉತ್ಪಾದಕರು ಮತ್ತು ಮಾರಾಟಗಾರರ ವಿರುದ್ಧ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ಜಾರಿಗೊಳಿಸುವ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತದ (FDA) ಕ್ರಮಕ್ಕೆ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಪ್ರಶ್ನೆ ಎತ್ತಿದೆ. ಈ ಕುರಿತು ಸಲ್ಲಿಸಲಾದ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಾಲಯ, ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದೆ.

ಇತ್ತೀಚೆಗೆ ಮಹಾರಾಷ್ಟ್ರ ಎಫ್‌ಡಿಎ ಆಯುಕ್ತ ತುಕಾರಾಂ ಮುಂಡೆ, ಗುಟ್ಕಾ ತಯಾರಕರು, ಸಾಗಣೆದಾರರು ಮತ್ತು ಮಾರಾಟಗಾರರನ್ನು ಸಂಘಟಿತ ಅಪರಾಧ ಜಾಲವೆಂದು ಪರಿಗಣಿಸಿ ಅವರ ವಿರುದ್ಧ ಎಂಸಿಒಸಿಎ ಅಡಿ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದರು. ಈ ನಿರ್ಧಾರವು ಆಹಾರ ಸುರಕ್ಷತಾ ಉಲ್ಲಂಘನೆಗಳ ವ್ಯಾಪ್ತಿಯನ್ನು ಮೀರಿ ಕಠಿಣ ಅಪರಾಧ ಕಾನೂನಿನ ಬಳಕೆಯೇ ಎಂಬ ಪ್ರಶ್ನೆ ಇದೀಗ ನ್ಯಾಯಾಲಯದ ಮುಂದೆ ಬಂದಿದೆ.

ವಿಚಾರಣೆ ವೇಳೆ, ಆಹಾರ ಸುರಕ್ಷತಾ ಉಲ್ಲಂಘನೆ ಪ್ರಕರಣಗಳಲ್ಲಿ ಎಂಸಿಒಸಿಎಯಂತಹ ಕಾನೂನನ್ನು ಅನ್ವಯಿಸಲು ಅಗತ್ಯವಾದ ಕಾನೂನು ಪ್ರಕ್ರಿಯೆ ಮತ್ತು ಅಧಿಕಾರಗಳ ಕುರಿತು ನ್ಯಾಯಾಲಯ ಪ್ರಶ್ನೆ ಎತ್ತಿದೆ. ಎಂಸಿಒಸಿಎ ಜಾರಿಗೂ ಮುನ್ನ ಕಾಯ್ದೆಯಲ್ಲಿರುವ ಕಡ್ಡಾಯ ಅನುಮೋದನೆಗಳು ಹಾಗೂ ಕಾನೂನು ಷರತ್ತುಗಳನ್ನು ಪಾಲಿಸಬೇಕೆಂದು ನ್ಯಾಯಾಲಯ ಸೂಚಿಸಿರುವುದಾಗಿ ವರದಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಈ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಎಫ್‌ಡಿಎ ತಮ್ಮ ನಿಲುವನ್ನು ನ್ಯಾಯಾಲಯದ ಮುಂದೆ ಮಂಡಿಸಲಿದ್ದು, ಅಂತಿಮ ತೀರ್ಪು ಗುಟ್ಕಾ ವಿರುದ್ಧದ ಮುಂದಿನ ಕಾನೂನು ಕ್ರಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೀಗಾದರೆ ಅಡಿಕೆ ಸಾಗಾಟದ ಸಂದರ್ಭ ಸೂಕ್ತ ತಪಾಸಣೆ, ಪ್ರಯೋಗಾಲಯದ ವರದಿಗಳು ಅಗತ್ಯವಾಗಬಹುದು.

The Nagpur Bench of the Bombay High Court has questioned Maharashtra FDA’s decision to invoke MCOCA against gutka-related food safety violations and has sought a response from the state government. The court is examining whether such stringent organised crime provisions can legally be applied in food safety cases.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

9 minutes ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

17 minutes ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

21 minutes ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

34 minutes ago

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

9 hours ago