Advertisement
ಸುದ್ದಿಗಳು

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

Share

ನಿಷೇಧಿತ ಗುಟ್ಕಾ ಉತ್ಪಾದಕರು ಮತ್ತು ಮಾರಾಟಗಾರರ ವಿರುದ್ಧ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ಜಾರಿಗೊಳಿಸುವ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತದ (FDA) ಕ್ರಮಕ್ಕೆ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಪ್ರಶ್ನೆ ಎತ್ತಿದೆ. ಈ ಕುರಿತು ಸಲ್ಲಿಸಲಾದ ಅರ್ಜಿಯನ್ನು ಸ್ವೀಕರಿಸಿರುವ ನ್ಯಾಯಾಲಯ, ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದೆ.

ಇತ್ತೀಚೆಗೆ ಮಹಾರಾಷ್ಟ್ರ ಎಫ್‌ಡಿಎ ಆಯುಕ್ತ ತುಕಾರಾಂ ಮುಂಡೆ, ಗುಟ್ಕಾ ತಯಾರಕರು, ಸಾಗಣೆದಾರರು ಮತ್ತು ಮಾರಾಟಗಾರರನ್ನು ಸಂಘಟಿತ ಅಪರಾಧ ಜಾಲವೆಂದು ಪರಿಗಣಿಸಿ ಅವರ ವಿರುದ್ಧ ಎಂಸಿಒಸಿಎ ಅಡಿ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದರು. ಈ ನಿರ್ಧಾರವು ಆಹಾರ ಸುರಕ್ಷತಾ ಉಲ್ಲಂಘನೆಗಳ ವ್ಯಾಪ್ತಿಯನ್ನು ಮೀರಿ ಕಠಿಣ ಅಪರಾಧ ಕಾನೂನಿನ ಬಳಕೆಯೇ ಎಂಬ ಪ್ರಶ್ನೆ ಇದೀಗ ನ್ಯಾಯಾಲಯದ ಮುಂದೆ ಬಂದಿದೆ.

ವಿಚಾರಣೆ ವೇಳೆ, ಆಹಾರ ಸುರಕ್ಷತಾ ಉಲ್ಲಂಘನೆ ಪ್ರಕರಣಗಳಲ್ಲಿ ಎಂಸಿಒಸಿಎಯಂತಹ ಕಾನೂನನ್ನು ಅನ್ವಯಿಸಲು ಅಗತ್ಯವಾದ ಕಾನೂನು ಪ್ರಕ್ರಿಯೆ ಮತ್ತು ಅಧಿಕಾರಗಳ ಕುರಿತು ನ್ಯಾಯಾಲಯ ಪ್ರಶ್ನೆ ಎತ್ತಿದೆ. ಎಂಸಿಒಸಿಎ ಜಾರಿಗೂ ಮುನ್ನ ಕಾಯ್ದೆಯಲ್ಲಿರುವ ಕಡ್ಡಾಯ ಅನುಮೋದನೆಗಳು ಹಾಗೂ ಕಾನೂನು ಷರತ್ತುಗಳನ್ನು ಪಾಲಿಸಬೇಕೆಂದು ನ್ಯಾಯಾಲಯ ಸೂಚಿಸಿರುವುದಾಗಿ ವರದಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಈ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಎಫ್‌ಡಿಎ ತಮ್ಮ ನಿಲುವನ್ನು ನ್ಯಾಯಾಲಯದ ಮುಂದೆ ಮಂಡಿಸಲಿದ್ದು, ಅಂತಿಮ ತೀರ್ಪು ಗುಟ್ಕಾ ವಿರುದ್ಧದ ಮುಂದಿನ ಕಾನೂನು ಕ್ರಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೀಗಾದರೆ ಅಡಿಕೆ ಸಾಗಾಟದ ಸಂದರ್ಭ ಸೂಕ್ತ ತಪಾಸಣೆ, ಪ್ರಯೋಗಾಲಯದ ವರದಿಗಳು ಅಗತ್ಯವಾಗಬಹುದು.

The Nagpur Bench of the Bombay High Court has questioned Maharashtra FDA’s decision to invoke MCOCA against gutka-related food safety violations and has sought a response from the state government. The court is examining whether such stringent organised crime provisions can legally be applied in food safety cases.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

5 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

5 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

19 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago