ರಾಜ್ಯ ಸರ್ಕಾರ ಈಗಾಗಲೇ ಹೇಳಿರುವಂತೆ ಗೃಹಿಣಿಯರಿಗೆ ಈ ಬಾರಿ ಬಜೆಟ್ನಲ್ಲಿ ಸಿಹಿಸುದ್ದಿಯನ್ನು ನೀಡಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಯ ಮೇಲೆ ಗೃಹಿಣಿಯರಿಗೆ ಮಾಸಿಕ ಸಹಾಯಧನ ನೀಡುವುದಾಗಿ ಭರವಸೆ ನೀಡಿದ್ದವು. ಅದಂತೆಯೇ ಈ ಬಾರಿ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ 10 ಸಾವಿರ ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಲ್ಲದೇ ಮಹಿಳೆಯರ ಸ್ವಾಲಂಬಿತನಕ್ಕೆ ಆದ್ಯತೆ ನೀಡಲಾಗಿದ್ದು, ಸರ್ಕಾರವು ಈ ಬಾರಿ ಗೃಹಿಣಿ ಶಕ್ತಿ ಯೋಜನೆಯನ್ನು ಪರಿಚಯ ಮಾಡಿದೆ.ಅಲ್ಲದೇ ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವ ಮಹತ್ವದ ಯೋಜನೆಯನ್ನು ಪರಿಚಯ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಮತದಾರರನ್ನು ಸೆಳೆಯಲು ಸರ್ಕಾರವು ಮುಂದಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




