ರಾಜ್ಯ ಸರ್ಕಾರ ಈಗಾಗಲೇ ಹೇಳಿರುವಂತೆ ಗೃಹಿಣಿಯರಿಗೆ ಈ ಬಾರಿ ಬಜೆಟ್ನಲ್ಲಿ ಸಿಹಿಸುದ್ದಿಯನ್ನು ನೀಡಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಯ ಮೇಲೆ ಗೃಹಿಣಿಯರಿಗೆ ಮಾಸಿಕ ಸಹಾಯಧನ ನೀಡುವುದಾಗಿ ಭರವಸೆ ನೀಡಿದ್ದವು. ಅದಂತೆಯೇ ಈ ಬಾರಿ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ 10 ಸಾವಿರ ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಲ್ಲದೇ ಮಹಿಳೆಯರ ಸ್ವಾಲಂಬಿತನಕ್ಕೆ ಆದ್ಯತೆ ನೀಡಲಾಗಿದ್ದು, ಸರ್ಕಾರವು ಈ ಬಾರಿ ಗೃಹಿಣಿ ಶಕ್ತಿ ಯೋಜನೆಯನ್ನು ಪರಿಚಯ ಮಾಡಿದೆ.ಅಲ್ಲದೇ ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವ ಮಹತ್ವದ ಯೋಜನೆಯನ್ನು ಪರಿಚಯ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಮತದಾರರನ್ನು ಸೆಳೆಯಲು ಸರ್ಕಾರವು ಮುಂದಾಗಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…