ಆಯುರ್ವೇದ ಪದ್ಧತಿ ಬಗ್ಗೆ ನಂಬಿಕೆ ಮತ್ತು ವಿಶ್ವಾಸ ಹೆಚ್ಚಾಗಬೇಕು. ನಮ್ಮನ್ನು ನಾವು ತಿಳಿದುಕೊಂಡು ನಮಗೆ ಸೂಕ್ತವಾದ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಆಹಾರವೇ ಔಷಧಿಯಾಗಬೇಕು ಅಲ್ಲದೆ ಔಷಧಿಯೇ ಆಹಾರವಾಗಬಾರದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಭಾನುವಾರ ಧರ್ಮಸ್ಥಳದಲ್ಲಿ ವಸಂತಮಹಲ್ನಲ್ಲಿ ಖ್ಯಾತ ಆಯುರ್ವೇದ ತಜ್ಞಡಾ. ಗಿರಿಧರ ಕಜೆ ಅವರ ಆರನೆ ಕೃತಿ “ಪ್ರಕೃತಿ” ಬಿಡುಗಡೆಗೊಳಿಸಿ ಮಾತನಾಡಿದರು. ಆಧುನಿಕ ಜೀವನಶೈಲಿ, ಆಹಾರ-ವಿಹಾರ, ಒತ್ತಡದ ಕೆಲಸಗಳೇ ಆರೋಗ್ಯ ಹದಗೆಡಲು ಕಾರಣವಾಗಿದೆ. ಪ್ರಾಚೀನ ಕಾಲದಿಂದಲೂ ಋಷಿ-ಮುನಿಗಳು ಪ್ರಕೃತಿಯ ಪ್ರಶಾಂತ ಪರಿಸರದಲ್ಲಿ ಆರೋಗ್ಯಪೂರ್ಣಜೀವನ ನಡೆಸುತ್ತಿದ್ದರು. ಶತಮಾನಗಳಿಂದ ಬಳಸುತ್ತಿದ್ದ ಪ್ರಕೃತಿಚಿಕಿತ್ಸಾ ಪದ್ಧತಿ, ಯೋಗಾಭ್ಯಾಸ, ಆಯುರ್ವೇದ ಪದ್ಧತಿಯಿಂದ ಆರೋಗ್ಯ ಭಾಗ್ಯದ ರಕ್ಷಣೆ ಸಾಧ್ಯವಾಗುತ್ತದೆ. ಆಯುರ್ವೇದ ಪದ್ಧತಿ ಬಗ್ಗೆ ಉನ್ನತ ಅಧ್ಯಯನ ಹಾಗೂ ಸಂಶೋಧನೆಗಳು ನಡೆಯಬೇಕು. ಸಂಶೋಧನಾ ಫಲಿತಾಂಶವನ್ನುಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಬಳಸಬೇಕು ಎಂದರು.ಉಡುಪಿ ಜಿಲ್ಲಾಉಸ್ತುವಾರಿ ಸಚಿವ ಎಸ್. ಅಂಗಾರ ಮಾತನಾಡಿ, ಧರ್ಮದ ನೆಲೆಯಲ್ಲಿ ನಾವು ಕರ್ಮ ಮಾಡಿ ಗೌರವಯುತ ಜೀವನ ನಡೆಸಬೇಕು. ಪ್ರಗತಿಯ ಹೆಸರಿನಲ್ಲಿ ಪ್ರಕೃತಿಯಿಂದ ನಾವು ವಿಮುಖರಾಗಿರುವುದೇ ಹೆಚ್ಚಿನ ರೋಗ ರುಜಿನಗಳಿಗೆ ಕಾರಣವಾಗಿದೆ. ಯಾವುದೇ ಪಾಶ್ರ್ವಪರಿಣಾಮಗಳಿಲ್ಲದ ಆಯುರ್ವೇದ ಪದ್ಧತಿಯನ್ನೆ ನಾವು ಬಳಸಬೇಕು ಎಂದು ಅವರು ಕಿವಿಮಾತು ಹೇಳಿದರು. ಡಾ. ಗಿರಿಧರಕಜೆ ಅವರ ಆಯುರ್ವೇದ ಚಿಕಿತ್ಸಾ ಪದ್ಧತಿಯ ಶುಶ್ರೂಷೆಯಿಂದ ತಾನು ಕೊರೊನಾದಿಂದ ಮುಕ್ತಿ ಪಡೆದಿರುವುದಾಗಿ ಸಚಿವರು ತಿಳಿಸಿದರು.
ಪ್ರಜಾವಾಣಿ ಪತ್ರಿಕೆಯ ಪ್ರಧಾನ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಮಾತನಾಡಿ, ಆಯುರ್ವೇದ ನಮ್ಮಜೀವನ ಪದ್ಧತಿಯಾಗಬೇಕು. ಆಯುರ್ವೇದ ಪದ್ಧತಿಯಿಂದ ನಮ್ಮಆರೋಗ್ಯ, ಆಯುಷ್ಯ ಮತ್ತುಆನಂದ ವೃದ್ಧಿಯಾಗಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು. ಆದರೆ ಇಂದಿನ ಬದಲಾದ ಆಧುನಿಕ ಜೀವನ ಶೈಲಿಯಲ್ಲಿ ನಾವು ಹಗಲು ಮಾಡುವ ಕೆಲಸವನ್ನು ರಾತ್ರಿ ಮಾಡುತ್ತೇವೆ. ರಾತ್ರಿ ಮಾಡುವ ಕೆಲಸವನ್ನು ಹಗಲು ಮಾಡುತ್ತೇವೆ. ಪ್ರಕೃತಿಯಿಂದ ದೂರವಾದಷ್ಟು ನಮ್ಮಲ್ಲಿ ವಾತ, ಪಿತ್ತ, ಕಫಗಳು ಜಾಸ್ತಿಯಾಗುತ್ತವೆ. ಆಹಾರ ಮತ್ತುಔಷಧಿ ಬೇರೆ ಬೇರೆಅಲ್ಲ ಒಂದೇ ಆಗಿರಬೇಕು ಎಂದು ಅವರು ಹೇಳಿದರು. ಟಿ.ವಿ. 9 ವಾಹಿನಿಯ ಪ್ರಧಾನ ನಿರೂಪಕ ರಂಗನಾಥ್ ಭಾರಧ್ವಾಜ್ ಮಾತನಾಡಿ ಸ್ವಚ್ಛ ಭಾರತ ನಿರ್ಮಾಣದ ಆಶಯದಂತೆ ಸ್ವಸ್ಥ ಬಾರತವೂ ನಮ್ಮಗುರಿಯಾಗಬೇಕು. ಮನೆಯ ಹಿತ್ತಲಲ್ಲಿರುವ ಗಿಡಮೂಲಿಕೆಗಳು ಕೂಡಾ ಔಷಧೀಯ ಗುಣ ಹೊಂದಿದ್ದು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಮ್ಮ ಮನಸ್ಸುಗಳು ಸದಾಜಾಗೃತವಾಗಿ, ಕಲ್ಮಶ ರಹಿತವಾಗಿದ್ದು, ಮಾನವೀಯ ಸಂಬಂಧಗಳೊಂದಿಗೆ ಜೀವನ ಮೌಲ್ಯಗಳನ್ನು ಉಳಿಸಿ, ಬೆಳೆಸಿದಾಗ ಆರೋಗ್ಯವಂತರಾಗಲು ಸಾಧ್ಯ. ಯೋಗಕ್ಕೆ ದೊರಕಿದಷ್ಟು ಮಹತ್ವ ಮತ್ತು ಪ್ರಚಾರ ಆಯುರ್ವೇದಕ್ಕೂ ಸಿಗಬೇಕು ಎಂದುಅವರು ಹೇಳಿದರು. “ಪ್ರಕೃತಿ” ಕೃತಿಯ ಲೇಖಕ ಡಾ. ಗಿರಿಧರಕಜೆ ಪುಸ್ತಕದ ಬಗ್ಗೆ ಸವಿವರ ಮಾಹಿತಿ ನೀಡಿದರು. ಸೆಲ್ಕೊ ಸಂಸ್ಥೆಯ ಸಿ.ಇ.ಒ. ಮೋಹನ ಭಾಸ್ಕರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಗೋವಿಂದಪ್ರಸಾದ್ ಕಜೆ ಸ್ವಾಗತಿಸಿದರು. ಶ್ರೀನಿವಾಸರಾವ್ ಧರ್ಮಸ್ಥಳ ವಂದಿಸಿದರು.ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…