ಬನಾರಿ ಶ್ರೀ ಗೋಪಾಲಕೃಷ್ಣ ಪ್ರಕಾಶನ ದೇಲಂಪಾಡಿ ಇವರ ಆಶ್ರಯದಲ್ಲಿ ತುಡರ್ ಯುವಕ ಮಂಡಲ ಕಾವು ಇವರ ಸಹಯೋಗದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ ಮನಮೋಹನ ಬನಾರಿ ಅವರ “ನ್ಯಾಯಧೀಶರ ನೆನಪುಗಳು” ಕೃತಿ ಬಿಡುಗಡೆ ಸಮಾರಂಭವು ಅ.30 ರಂದು ಕಾವು ಜನಮಂಗಲ ಸಭಾಭವನದಲ್ಲಿ ಸಂಜೆ 3.30ಕ್ಕೆ ನಡೆಯಲಿದೆ.
ಕೃತಿಯನ್ನು ಶ್ರೀಗಜಾನನ ವಿದ್ಯಾಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಬಿಡುಗಡೆಗೊಳಿಸುವರು. ನಿವೃತ್ತ ನ್ಯಾಯಾಧೀಶ ಕುಕ್ಕಜೆ ರಾಮಕೃಷ್ಣ ಭಟ್ ಸಭಾಧ್ಯಕ್ಷತೆ ವಹಿಸುವರು. ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಇದರ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಸ್ತಾವನೆಗೈಯುವರು. ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್ ಪುಸ್ತಕ ಅವಲೋಕನ ಮಾಡುವರು. ನಿವೃತ್ತ ಜಿಲ್ಲಾನ್ಯಾಯಾಧೀಶ ಕೆ ಮನಮೋಹನ ಬನಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…