ನಮ್ಮ ಜನಪದರು ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸುತ್ತಿದ್ದರು. ಅದು ಅತ್ಯಂತ ಮುಖ್ಯವಾದ ಕೆಲಸ. ಆದರೆ ಇಂದು ಮಕ್ಕಳಿಗೆ ಊಟ ಮಾಡಿಸಲು ಈಗ ಮೊಬೈಲ್ ಫೋನ್ ಕೊಡುವುದು ಅನಿವಾರ್ಯವಾಗಿದೆ. ಈ ಕಾರಣದಿಂದಲೇ ಸಮಾಜದ ಪರಿಸ್ಥಿತಿ ಹದಗೆಡುತ್ತಿದೆ ಎಂದು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.
ವಸಂತ ಪ್ರಕಾಶನ ಪ್ರಕಟಿಸಿರುವ ಎಚ್ ಎಸ್ ವೆಂಕಟೇಶಮೂರ್ತಿ ಸಂಪಾದಿಸಿರುವ “ವಸಂತ ಬಾಲ ಸಾಹಿತ್ಯ” ಮಾಲೆಯ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಟ ಮತ್ತು ಊಟದ ಹೊತ್ತಿನಲ್ಲಿ ಮಕ್ಕಳ ಪ್ರಪಂಚ ಜ್ಞಾನವನ್ನು ಸೃಜನಶೀಲವಾಗಿ ಹಿರಿಯರು ತುಂಬುತ್ತಿದ್ದರು.ಇದಕ್ಕಾಗಿಯೇ ಎಲ್ಲರೂ ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಆದರೆ ಈಗಿನ ಮಕ್ಕಳಿಗೆ ಮೊಬೈಲ್ ಇಲ್ಲದೆ ಊಟ ಮಾಡಿಸು ವುದೇ ಕಷ್ಟ. ಜೊತೆಗೆ ಊಟ ಮಾಡುವ ಪರಿಪಾಠವೇ ದೂರವಾಗಿದೆ. ಫೋನ್ನಲ್ಲಿ ಬರುವ ಚಿತ್ರ ಗಳಿಗೂ, ತಿನ್ನುವ ತುತ್ತಿಗೂ ಸಂಬಂಧವೇ ಇರುವುದಿಲ್ಲ ಎಂದು ಹೇಳಿದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…