ನಮ್ಮ ಜನಪದರು ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸುತ್ತಿದ್ದರು. ಅದು ಅತ್ಯಂತ ಮುಖ್ಯವಾದ ಕೆಲಸ. ಆದರೆ ಇಂದು ಮಕ್ಕಳಿಗೆ ಊಟ ಮಾಡಿಸಲು ಈಗ ಮೊಬೈಲ್ ಫೋನ್ ಕೊಡುವುದು ಅನಿವಾರ್ಯವಾಗಿದೆ. ಈ ಕಾರಣದಿಂದಲೇ ಸಮಾಜದ ಪರಿಸ್ಥಿತಿ ಹದಗೆಡುತ್ತಿದೆ ಎಂದು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.
ವಸಂತ ಪ್ರಕಾಶನ ಪ್ರಕಟಿಸಿರುವ ಎಚ್ ಎಸ್ ವೆಂಕಟೇಶಮೂರ್ತಿ ಸಂಪಾದಿಸಿರುವ “ವಸಂತ ಬಾಲ ಸಾಹಿತ್ಯ” ಮಾಲೆಯ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಟ ಮತ್ತು ಊಟದ ಹೊತ್ತಿನಲ್ಲಿ ಮಕ್ಕಳ ಪ್ರಪಂಚ ಜ್ಞಾನವನ್ನು ಸೃಜನಶೀಲವಾಗಿ ಹಿರಿಯರು ತುಂಬುತ್ತಿದ್ದರು.ಇದಕ್ಕಾಗಿಯೇ ಎಲ್ಲರೂ ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಆದರೆ ಈಗಿನ ಮಕ್ಕಳಿಗೆ ಮೊಬೈಲ್ ಇಲ್ಲದೆ ಊಟ ಮಾಡಿಸು ವುದೇ ಕಷ್ಟ. ಜೊತೆಗೆ ಊಟ ಮಾಡುವ ಪರಿಪಾಠವೇ ದೂರವಾಗಿದೆ. ಫೋನ್ನಲ್ಲಿ ಬರುವ ಚಿತ್ರ ಗಳಿಗೂ, ತಿನ್ನುವ ತುತ್ತಿಗೂ ಸಂಬಂಧವೇ ಇರುವುದಿಲ್ಲ ಎಂದು ಹೇಳಿದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…