ಯುವ ಕವಯತ್ರಿ ಸುಪ್ರೀತಾ ಅವರ ಕವನ ಸಂಕಲನ ಬಿಡುಗಡೆ | ಪ್ರಾಧ್ಯಾಪಕ ರಘುನಂದನ ಅವರ `ಹಿಂದಿ ಶಿಕ್ಷಣ ಪದ್ಧತಿ’ ಪುಸ್ತಕ ಬಿಡುಗಡೆ |

March 18, 2022
8:41 PM

ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು.

ವಂ. ಬಿಷಪ್ ಡಾ. ಮಾರ್ ಮಕಾರಿಯೋಸ್‌ ಅವರ ಸಮ್ಮುಖದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಡಾ. ಎಲ್ದೊ ಪುತ್ತನ್ ಕಂಡತ್ತಿಲ್, ಕಡಬ ಸೈಂಟ್ ಆನ್ಸ್ ಸಂಸ್ಥೆಗಳ ಸಂಚಾಲಕ ಫಾ. ಅರುಣ್ ವಿಲ್ಸನ್ ಲೋಬೋ ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಕವಿಯತ್ರಿ ಸುಪ್ರಿತಾ ಚರಣ್ ಪಾಲಪ್ಪೆ ಕಡಬ ಮಾತನಾಡಿ, ಈ ಕವನ ಸಂಕಲನ ಬಿಡುಗಡೆಗೊಂಡಿರುವುದು ನನಗೆ ಹೆಮ್ಮೆಯ ವಿಚಾರವಾಗಿದೆ. ಯುವ ಬರಹಗಾರರು ಪುಸ್ತಕವನ್ನು ಕೊಂಡು ಓದಿ ಪ್ರೋತ್ಸಾಹಿಸಿ, ಅದು ನಮಗೆ ಸ್ಫೂರ್ತಿಯಾಗಲಿದೆ ಎಂದ ಅವರು ಪುಸ್ತಕದ ಹಿಂದೆ ಪರಿಶ್ರಮಿಸಿದವರಿಗೆ ನಾನು ಅಭಾರಿಯಾಗಿರುತ್ತೇನೆಂದು ಹೇಳಿದರು. ವೇದಿಕೆಯಲ್ಲಿ ಪ್ರಾಂಶುಪಾಲೆ ಉಷಾ ಎಂ.ಎಲ್ ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.

ಇದೇ ವೇಳೆ  ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಬಿ.ಎಡ್ ಪಠ್ಯಕ್ರಮದ ದ್ವಿತೀಯ ಸೆಮಿಸ್ಟರ್‌ಗೆ ಅನುಗುಣವಾಗಿ ಹಿಂದಿ ಶಿಕ್ಷಣ ಪದ್ಧತಿ ಎಂಬ ಪಠ್ಯ ಪುಸ್ತಕವನ್ನು ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ರಘುನಂದನ .ಕೆ ಅವರು ಬರೆದ ಪಠ್ಯ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror