ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು.
ವಂ. ಬಿಷಪ್ ಡಾ. ಮಾರ್ ಮಕಾರಿಯೋಸ್ ಅವರ ಸಮ್ಮುಖದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಡಾ. ಎಲ್ದೊ ಪುತ್ತನ್ ಕಂಡತ್ತಿಲ್, ಕಡಬ ಸೈಂಟ್ ಆನ್ಸ್ ಸಂಸ್ಥೆಗಳ ಸಂಚಾಲಕ ಫಾ. ಅರುಣ್ ವಿಲ್ಸನ್ ಲೋಬೋ ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಕವಿಯತ್ರಿ ಸುಪ್ರಿತಾ ಚರಣ್ ಪಾಲಪ್ಪೆ ಕಡಬ ಮಾತನಾಡಿ, ಈ ಕವನ ಸಂಕಲನ ಬಿಡುಗಡೆಗೊಂಡಿರುವುದು ನನಗೆ ಹೆಮ್ಮೆಯ ವಿಚಾರವಾಗಿದೆ. ಯುವ ಬರಹಗಾರರು ಪುಸ್ತಕವನ್ನು ಕೊಂಡು ಓದಿ ಪ್ರೋತ್ಸಾಹಿಸಿ, ಅದು ನಮಗೆ ಸ್ಫೂರ್ತಿಯಾಗಲಿದೆ ಎಂದ ಅವರು ಪುಸ್ತಕದ ಹಿಂದೆ ಪರಿಶ್ರಮಿಸಿದವರಿಗೆ ನಾನು ಅಭಾರಿಯಾಗಿರುತ್ತೇನೆಂದು ಹೇಳಿದರು. ವೇದಿಕೆಯಲ್ಲಿ ಪ್ರಾಂಶುಪಾಲೆ ಉಷಾ ಎಂ.ಎಲ್ ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.
ಇದೇ ವೇಳೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಬಿ.ಎಡ್ ಪಠ್ಯಕ್ರಮದ ದ್ವಿತೀಯ ಸೆಮಿಸ್ಟರ್ಗೆ ಅನುಗುಣವಾಗಿ ಹಿಂದಿ ಶಿಕ್ಷಣ ಪದ್ಧತಿ ಎಂಬ ಪಠ್ಯ ಪುಸ್ತಕವನ್ನು ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ರಘುನಂದನ .ಕೆ ಅವರು ಬರೆದ ಪಠ್ಯ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…