Advertisement
ಸುದ್ದಿಗಳು

ಯುವ ಕವಯತ್ರಿ ಸುಪ್ರೀತಾ ಅವರ ಕವನ ಸಂಕಲನ ಬಿಡುಗಡೆ | ಪ್ರಾಧ್ಯಾಪಕ ರಘುನಂದನ ಅವರ `ಹಿಂದಿ ಶಿಕ್ಷಣ ಪದ್ಧತಿ’ ಪುಸ್ತಕ ಬಿಡುಗಡೆ |

Share

ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು.

ವಂ. ಬಿಷಪ್ ಡಾ. ಮಾರ್ ಮಕಾರಿಯೋಸ್‌ ಅವರ ಸಮ್ಮುಖದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಡಾ. ಎಲ್ದೊ ಪುತ್ತನ್ ಕಂಡತ್ತಿಲ್, ಕಡಬ ಸೈಂಟ್ ಆನ್ಸ್ ಸಂಸ್ಥೆಗಳ ಸಂಚಾಲಕ ಫಾ. ಅರುಣ್ ವಿಲ್ಸನ್ ಲೋಬೋ ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಕವಿಯತ್ರಿ ಸುಪ್ರಿತಾ ಚರಣ್ ಪಾಲಪ್ಪೆ ಕಡಬ ಮಾತನಾಡಿ, ಈ ಕವನ ಸಂಕಲನ ಬಿಡುಗಡೆಗೊಂಡಿರುವುದು ನನಗೆ ಹೆಮ್ಮೆಯ ವಿಚಾರವಾಗಿದೆ. ಯುವ ಬರಹಗಾರರು ಪುಸ್ತಕವನ್ನು ಕೊಂಡು ಓದಿ ಪ್ರೋತ್ಸಾಹಿಸಿ, ಅದು ನಮಗೆ ಸ್ಫೂರ್ತಿಯಾಗಲಿದೆ ಎಂದ ಅವರು ಪುಸ್ತಕದ ಹಿಂದೆ ಪರಿಶ್ರಮಿಸಿದವರಿಗೆ ನಾನು ಅಭಾರಿಯಾಗಿರುತ್ತೇನೆಂದು ಹೇಳಿದರು. ವೇದಿಕೆಯಲ್ಲಿ ಪ್ರಾಂಶುಪಾಲೆ ಉಷಾ ಎಂ.ಎಲ್ ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.

ಇದೇ ವೇಳೆ  ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಬಿ.ಎಡ್ ಪಠ್ಯಕ್ರಮದ ದ್ವಿತೀಯ ಸೆಮಿಸ್ಟರ್‌ಗೆ ಅನುಗುಣವಾಗಿ ಹಿಂದಿ ಶಿಕ್ಷಣ ಪದ್ಧತಿ ಎಂಬ ಪಠ್ಯ ಪುಸ್ತಕವನ್ನು ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ರಘುನಂದನ .ಕೆ ಅವರು ಬರೆದ ಪಠ್ಯ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

2 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

2 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

12 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

12 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

13 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

21 hours ago