ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು.
ವಂ. ಬಿಷಪ್ ಡಾ. ಮಾರ್ ಮಕಾರಿಯೋಸ್ ಅವರ ಸಮ್ಮುಖದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಡಾ. ಎಲ್ದೊ ಪುತ್ತನ್ ಕಂಡತ್ತಿಲ್, ಕಡಬ ಸೈಂಟ್ ಆನ್ಸ್ ಸಂಸ್ಥೆಗಳ ಸಂಚಾಲಕ ಫಾ. ಅರುಣ್ ವಿಲ್ಸನ್ ಲೋಬೋ ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಕವಿಯತ್ರಿ ಸುಪ್ರಿತಾ ಚರಣ್ ಪಾಲಪ್ಪೆ ಕಡಬ ಮಾತನಾಡಿ, ಈ ಕವನ ಸಂಕಲನ ಬಿಡುಗಡೆಗೊಂಡಿರುವುದು ನನಗೆ ಹೆಮ್ಮೆಯ ವಿಚಾರವಾಗಿದೆ. ಯುವ ಬರಹಗಾರರು ಪುಸ್ತಕವನ್ನು ಕೊಂಡು ಓದಿ ಪ್ರೋತ್ಸಾಹಿಸಿ, ಅದು ನಮಗೆ ಸ್ಫೂರ್ತಿಯಾಗಲಿದೆ ಎಂದ ಅವರು ಪುಸ್ತಕದ ಹಿಂದೆ ಪರಿಶ್ರಮಿಸಿದವರಿಗೆ ನಾನು ಅಭಾರಿಯಾಗಿರುತ್ತೇನೆಂದು ಹೇಳಿದರು. ವೇದಿಕೆಯಲ್ಲಿ ಪ್ರಾಂಶುಪಾಲೆ ಉಷಾ ಎಂ.ಎಲ್ ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.
ಇದೇ ವೇಳೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಬಿ.ಎಡ್ ಪಠ್ಯಕ್ರಮದ ದ್ವಿತೀಯ ಸೆಮಿಸ್ಟರ್ಗೆ ಅನುಗುಣವಾಗಿ ಹಿಂದಿ ಶಿಕ್ಷಣ ಪದ್ಧತಿ ಎಂಬ ಪಠ್ಯ ಪುಸ್ತಕವನ್ನು ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ರಘುನಂದನ .ಕೆ ಅವರು ಬರೆದ ಪಠ್ಯ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…