ವಿಫಲ ಕೊಳವೆಬಾವಿ ಸಮರ್ಪಕವಾಗಿ ಮುಚ್ಚಲು ಗ್ರಾಮ ಪಂಚಾಯತ್ ಗಳಿಗೆ ತಾಪಂ ಸೂಚನೆ

Share

ಕುಡಿಯುವ ನೀರಿಗಾಗಿ ಕೊಳವೆಬಾವಿ ತೆರೆಯುವ ಸಂದರ್ಭ ವಿಫಲವಾದ ಕೊಳವೆಬಾವಿಗಳನ್ನು  ಸಮರ್ಪಕವಾಗಿ ಮುಚ್ಚಲು ಸುಳ್ಯ ತಾಲೂಕು ಪಂಚಾಯತ್‌ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ ಗಳಿಗೆ ಸೂಚನೆ ನೀಡಿದೆ.

ಸುಳ್ಯ ತಾಲೂಕು ಪಂಚಾಯತ್‌ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಮಿಲದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆಗೆ ಕೊಳವೆಬಾವಿ ತೆಗೆದು ಕೇಸಿಂಗ್‌ ಪೈಪ್‌ ಕೂಡಾ ತೆಗೆದು  ಕೊಳವೆಬಾವಿ ಅಪಾಯ ಸ್ಥಿತಿಯಲ್ಲಿ ಇರುವ ಬಗ್ಗೆ ಪ್ರಸ್ತಾಪವಾಗಿತ್ತು.

ಈ ಬಗ್ಗೆ ಮುಖ್ಯಮಂತ್ರಿಗಳ ಟ್ವಿಟ್ಟರ್‌ ಖಾತೆಗೆ ಸಾರ್ವಜನಿಕರಿಂದ ದೂರು ಹಾಗೂ ವಿವಿಧ ಪತ್ರಿಕೆಗಳಲ್ಲಿ  ಬಂದ ವರದಿಯ ಬಗ್ಗೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಅವರು ಗಮನಿಸಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಚರ್ಚೆ ನಡೆದು ಮುಂದೆ ಇಂತಹ ಪ್ರಕರಣಗಳು ಮುಂದೆಂದೂ ಕಂಡು ಬರದ ರೀತಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌  ವ್ಯಾಪ್ತಿಯಲ್ಲಿ ವಿಫಲವಾದ ಕೊಳವೆಬಾವಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಮಪರ್ಕವಾಗಿ ಮುಚ್ಚಲು ಎಲ್ಲಾ ಗ್ರಾಮ ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಲಿಖಿತ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ತೆರೆದ ಕೊಳವೆಬಾವಿ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಗೆ ಟ್ವಿಟ್ಟರ್‌ ಮೂಲಕ ನೀಡಿರುವ ದೂರಿಗೆ ತಕ್ಷಣವೇ ಸ್ಪಂದಿಸಿ ಕಚೇರಿಯಿಂದಲೂ ಪರಿಶೀಲನೆ ನಡೆದಿತ್ತು. ಬಳಿಕ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.

ಜಾಹ್ನವಿ ಕಾಂಚೋಡು
ತೆರೆದ ಕೊಳವೆಬಾವಿಗಳು ಅಪಾಯವನ್ನು ಆಹ್ವಾನ ಮಾಡಿರುವುದು  ಈಗಾಗಲೇ ವಿವಿದೆಡೆ ಕಂಡುಬಂದಿದೆ. ಸುಳ್ಯ ತಾಲೂಕು ಹಾಗೂ ದ ಕ ಜಿಲ್ಲೆಯಲ್ಲಿ ಇಂತಹ ಅಪಾಯಗಳು ಆಗದಂತೆ ಕ್ರಮ ಆಗಲೇಬೇಕಿದೆ. ಸಾಮಾಜಿಕ ಜವಾಬ್ದಾರಿಯಿಂದ ಸೋಶಿಯಲ್‌ ಮೀಡಿಯಾ ಹಾಗೂ ಪತ್ರಿಕೆಗಳಲ್ಲಿ  ಬಂದ ಆಧಾರದಲ್ಲಿ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ವಿಷಯ ತರಲಾಗಿತ್ತು.  – ಜಾಹ್ನವಿ ಕಾಂಚೋಡು, ಅಧ್ಯಕ್ಷರು, ಸಾಮಾಜಿಕ ನ್ಯಾಯ ಸಮಿತಿ, ಸುಳ್ಯ ತಾಪಂ

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

3 hours ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

8 hours ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

10 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

11 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

11 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

12 hours ago