Advertisement

ವಿಫಲ ಕೊಳವೆಬಾವಿ ಸಮರ್ಪಕವಾಗಿ ಮುಚ್ಚಲು ಗ್ರಾಮ ಪಂಚಾಯತ್ ಗಳಿಗೆ ತಾಪಂ ಸೂಚನೆ

Share

ಕುಡಿಯುವ ನೀರಿಗಾಗಿ ಕೊಳವೆಬಾವಿ ತೆರೆಯುವ ಸಂದರ್ಭ ವಿಫಲವಾದ ಕೊಳವೆಬಾವಿಗಳನ್ನು  ಸಮರ್ಪಕವಾಗಿ ಮುಚ್ಚಲು ಸುಳ್ಯ ತಾಲೂಕು ಪಂಚಾಯತ್‌ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ ಗಳಿಗೆ ಸೂಚನೆ ನೀಡಿದೆ.

Advertisement
Advertisement
Advertisement
Advertisement

ಸುಳ್ಯ ತಾಲೂಕು ಪಂಚಾಯತ್‌ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಮಿಲದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆಗೆ ಕೊಳವೆಬಾವಿ ತೆಗೆದು ಕೇಸಿಂಗ್‌ ಪೈಪ್‌ ಕೂಡಾ ತೆಗೆದು  ಕೊಳವೆಬಾವಿ ಅಪಾಯ ಸ್ಥಿತಿಯಲ್ಲಿ ಇರುವ ಬಗ್ಗೆ ಪ್ರಸ್ತಾಪವಾಗಿತ್ತು.

Advertisement

ಈ ಬಗ್ಗೆ ಮುಖ್ಯಮಂತ್ರಿಗಳ ಟ್ವಿಟ್ಟರ್‌ ಖಾತೆಗೆ ಸಾರ್ವಜನಿಕರಿಂದ ದೂರು ಹಾಗೂ ವಿವಿಧ ಪತ್ರಿಕೆಗಳಲ್ಲಿ  ಬಂದ ವರದಿಯ ಬಗ್ಗೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಅವರು ಗಮನಿಸಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಚರ್ಚೆ ನಡೆದು ಮುಂದೆ ಇಂತಹ ಪ್ರಕರಣಗಳು ಮುಂದೆಂದೂ ಕಂಡು ಬರದ ರೀತಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌  ವ್ಯಾಪ್ತಿಯಲ್ಲಿ ವಿಫಲವಾದ ಕೊಳವೆಬಾವಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಮಪರ್ಕವಾಗಿ ಮುಚ್ಚಲು ಎಲ್ಲಾ ಗ್ರಾಮ ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಲಿಖಿತ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ತೆರೆದ ಕೊಳವೆಬಾವಿ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಗೆ ಟ್ವಿಟ್ಟರ್‌ ಮೂಲಕ ನೀಡಿರುವ ದೂರಿಗೆ ತಕ್ಷಣವೇ ಸ್ಪಂದಿಸಿ ಕಚೇರಿಯಿಂದಲೂ ಪರಿಶೀಲನೆ ನಡೆದಿತ್ತು. ಬಳಿಕ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.

Advertisement
ಜಾಹ್ನವಿ ಕಾಂಚೋಡು
ತೆರೆದ ಕೊಳವೆಬಾವಿಗಳು ಅಪಾಯವನ್ನು ಆಹ್ವಾನ ಮಾಡಿರುವುದು  ಈಗಾಗಲೇ ವಿವಿದೆಡೆ ಕಂಡುಬಂದಿದೆ. ಸುಳ್ಯ ತಾಲೂಕು ಹಾಗೂ ದ ಕ ಜಿಲ್ಲೆಯಲ್ಲಿ ಇಂತಹ ಅಪಾಯಗಳು ಆಗದಂತೆ ಕ್ರಮ ಆಗಲೇಬೇಕಿದೆ. ಸಾಮಾಜಿಕ ಜವಾಬ್ದಾರಿಯಿಂದ ಸೋಶಿಯಲ್‌ ಮೀಡಿಯಾ ಹಾಗೂ ಪತ್ರಿಕೆಗಳಲ್ಲಿ  ಬಂದ ಆಧಾರದಲ್ಲಿ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ವಿಷಯ ತರಲಾಗಿತ್ತು.  – ಜಾಹ್ನವಿ ಕಾಂಚೋಡು, ಅಧ್ಯಕ್ಷರು, ಸಾಮಾಜಿಕ ನ್ಯಾಯ ಸಮಿತಿ, ಸುಳ್ಯ ತಾಪಂ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

13 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

13 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

13 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

13 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

13 hours ago

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…

13 hours ago