ವಿಫಲ ಕೊಳವೆಬಾವಿ ಸಮರ್ಪಕವಾಗಿ ಮುಚ್ಚಲು ಗ್ರಾಮ ಪಂಚಾಯತ್ ಗಳಿಗೆ ತಾಪಂ ಸೂಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಡಿಯುವ ನೀರಿಗಾಗಿ ಕೊಳವೆಬಾವಿ ತೆರೆಯುವ ಸಂದರ್ಭ ವಿಫಲವಾದ ಕೊಳವೆಬಾವಿಗಳನ್ನು  ಸಮರ್ಪಕವಾಗಿ ಮುಚ್ಚಲು ಸುಳ್ಯ ತಾಲೂಕು ಪಂಚಾಯತ್‌ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ ಗಳಿಗೆ ಸೂಚನೆ ನೀಡಿದೆ.

Advertisement

ಸುಳ್ಯ ತಾಲೂಕು ಪಂಚಾಯತ್‌ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಮಿಲದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆಗೆ ಕೊಳವೆಬಾವಿ ತೆಗೆದು ಕೇಸಿಂಗ್‌ ಪೈಪ್‌ ಕೂಡಾ ತೆಗೆದು  ಕೊಳವೆಬಾವಿ ಅಪಾಯ ಸ್ಥಿತಿಯಲ್ಲಿ ಇರುವ ಬಗ್ಗೆ ಪ್ರಸ್ತಾಪವಾಗಿತ್ತು.

ಈ ಬಗ್ಗೆ ಮುಖ್ಯಮಂತ್ರಿಗಳ ಟ್ವಿಟ್ಟರ್‌ ಖಾತೆಗೆ ಸಾರ್ವಜನಿಕರಿಂದ ದೂರು ಹಾಗೂ ವಿವಿಧ ಪತ್ರಿಕೆಗಳಲ್ಲಿ  ಬಂದ ವರದಿಯ ಬಗ್ಗೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಅವರು ಗಮನಿಸಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಚರ್ಚೆ ನಡೆದು ಮುಂದೆ ಇಂತಹ ಪ್ರಕರಣಗಳು ಮುಂದೆಂದೂ ಕಂಡು ಬರದ ರೀತಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌  ವ್ಯಾಪ್ತಿಯಲ್ಲಿ ವಿಫಲವಾದ ಕೊಳವೆಬಾವಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಮಪರ್ಕವಾಗಿ ಮುಚ್ಚಲು ಎಲ್ಲಾ ಗ್ರಾಮ ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಲಿಖಿತ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ತೆರೆದ ಕೊಳವೆಬಾವಿ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಗೆ ಟ್ವಿಟ್ಟರ್‌ ಮೂಲಕ ನೀಡಿರುವ ದೂರಿಗೆ ತಕ್ಷಣವೇ ಸ್ಪಂದಿಸಿ ಕಚೇರಿಯಿಂದಲೂ ಪರಿಶೀಲನೆ ನಡೆದಿತ್ತು. ಬಳಿಕ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.

ಜಾಹ್ನವಿ ಕಾಂಚೋಡು
ತೆರೆದ ಕೊಳವೆಬಾವಿಗಳು ಅಪಾಯವನ್ನು ಆಹ್ವಾನ ಮಾಡಿರುವುದು  ಈಗಾಗಲೇ ವಿವಿದೆಡೆ ಕಂಡುಬಂದಿದೆ. ಸುಳ್ಯ ತಾಲೂಕು ಹಾಗೂ ದ ಕ ಜಿಲ್ಲೆಯಲ್ಲಿ ಇಂತಹ ಅಪಾಯಗಳು ಆಗದಂತೆ ಕ್ರಮ ಆಗಲೇಬೇಕಿದೆ. ಸಾಮಾಜಿಕ ಜವಾಬ್ದಾರಿಯಿಂದ ಸೋಶಿಯಲ್‌ ಮೀಡಿಯಾ ಹಾಗೂ ಪತ್ರಿಕೆಗಳಲ್ಲಿ  ಬಂದ ಆಧಾರದಲ್ಲಿ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ವಿಷಯ ತರಲಾಗಿತ್ತು.  – ಜಾಹ್ನವಿ ಕಾಂಚೋಡು, ಅಧ್ಯಕ್ಷರು, ಸಾಮಾಜಿಕ ನ್ಯಾಯ ಸಮಿತಿ, ಸುಳ್ಯ ತಾಪಂ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

10 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

11 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

11 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

20 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago