Advertisement

ವಿಫಲ ಕೊಳವೆಬಾವಿ ಸಮರ್ಪಕವಾಗಿ ಮುಚ್ಚಲು ಗ್ರಾಮ ಪಂಚಾಯತ್ ಗಳಿಗೆ ತಾಪಂ ಸೂಚನೆ

Share

ಕುಡಿಯುವ ನೀರಿಗಾಗಿ ಕೊಳವೆಬಾವಿ ತೆರೆಯುವ ಸಂದರ್ಭ ವಿಫಲವಾದ ಕೊಳವೆಬಾವಿಗಳನ್ನು  ಸಮರ್ಪಕವಾಗಿ ಮುಚ್ಚಲು ಸುಳ್ಯ ತಾಲೂಕು ಪಂಚಾಯತ್‌ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ ಗಳಿಗೆ ಸೂಚನೆ ನೀಡಿದೆ.

ಸುಳ್ಯ ತಾಲೂಕು ಪಂಚಾಯತ್‌ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಮಿಲದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆಗೆ ಕೊಳವೆಬಾವಿ ತೆಗೆದು ಕೇಸಿಂಗ್‌ ಪೈಪ್‌ ಕೂಡಾ ತೆಗೆದು  ಕೊಳವೆಬಾವಿ ಅಪಾಯ ಸ್ಥಿತಿಯಲ್ಲಿ ಇರುವ ಬಗ್ಗೆ ಪ್ರಸ್ತಾಪವಾಗಿತ್ತು.

ಈ ಬಗ್ಗೆ ಮುಖ್ಯಮಂತ್ರಿಗಳ ಟ್ವಿಟ್ಟರ್‌ ಖಾತೆಗೆ ಸಾರ್ವಜನಿಕರಿಂದ ದೂರು ಹಾಗೂ ವಿವಿಧ ಪತ್ರಿಕೆಗಳಲ್ಲಿ  ಬಂದ ವರದಿಯ ಬಗ್ಗೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಅವರು ಗಮನಿಸಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಚರ್ಚೆ ನಡೆದು ಮುಂದೆ ಇಂತಹ ಪ್ರಕರಣಗಳು ಮುಂದೆಂದೂ ಕಂಡು ಬರದ ರೀತಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌  ವ್ಯಾಪ್ತಿಯಲ್ಲಿ ವಿಫಲವಾದ ಕೊಳವೆಬಾವಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಮಪರ್ಕವಾಗಿ ಮುಚ್ಚಲು ಎಲ್ಲಾ ಗ್ರಾಮ ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಲಿಖಿತ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ತೆರೆದ ಕೊಳವೆಬಾವಿ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಗೆ ಟ್ವಿಟ್ಟರ್‌ ಮೂಲಕ ನೀಡಿರುವ ದೂರಿಗೆ ತಕ್ಷಣವೇ ಸ್ಪಂದಿಸಿ ಕಚೇರಿಯಿಂದಲೂ ಪರಿಶೀಲನೆ ನಡೆದಿತ್ತು. ಬಳಿಕ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.

ಜಾಹ್ನವಿ ಕಾಂಚೋಡು
ತೆರೆದ ಕೊಳವೆಬಾವಿಗಳು ಅಪಾಯವನ್ನು ಆಹ್ವಾನ ಮಾಡಿರುವುದು  ಈಗಾಗಲೇ ವಿವಿದೆಡೆ ಕಂಡುಬಂದಿದೆ. ಸುಳ್ಯ ತಾಲೂಕು ಹಾಗೂ ದ ಕ ಜಿಲ್ಲೆಯಲ್ಲಿ ಇಂತಹ ಅಪಾಯಗಳು ಆಗದಂತೆ ಕ್ರಮ ಆಗಲೇಬೇಕಿದೆ. ಸಾಮಾಜಿಕ ಜವಾಬ್ದಾರಿಯಿಂದ ಸೋಶಿಯಲ್‌ ಮೀಡಿಯಾ ಹಾಗೂ ಪತ್ರಿಕೆಗಳಲ್ಲಿ  ಬಂದ ಆಧಾರದಲ್ಲಿ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ವಿಷಯ ತರಲಾಗಿತ್ತು.  – ಜಾಹ್ನವಿ ಕಾಂಚೋಡು, ಅಧ್ಯಕ್ಷರು, ಸಾಮಾಜಿಕ ನ್ಯಾಯ ಸಮಿತಿ, ಸುಳ್ಯ ತಾಪಂ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

22 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

22 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago