Advertisement

ವಿಫಲ ಕೊಳವೆಬಾವಿ ಸಮರ್ಪಕವಾಗಿ ಮುಚ್ಚಲು ಗ್ರಾಮ ಪಂಚಾಯತ್ ಗಳಿಗೆ ತಾಪಂ ಸೂಚನೆ

Share

ಕುಡಿಯುವ ನೀರಿಗಾಗಿ ಕೊಳವೆಬಾವಿ ತೆರೆಯುವ ಸಂದರ್ಭ ವಿಫಲವಾದ ಕೊಳವೆಬಾವಿಗಳನ್ನು  ಸಮರ್ಪಕವಾಗಿ ಮುಚ್ಚಲು ಸುಳ್ಯ ತಾಲೂಕು ಪಂಚಾಯತ್‌ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ ಗಳಿಗೆ ಸೂಚನೆ ನೀಡಿದೆ.

Advertisement
Advertisement

ಸುಳ್ಯ ತಾಲೂಕು ಪಂಚಾಯತ್‌ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಮಿಲದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆಗೆ ಕೊಳವೆಬಾವಿ ತೆಗೆದು ಕೇಸಿಂಗ್‌ ಪೈಪ್‌ ಕೂಡಾ ತೆಗೆದು  ಕೊಳವೆಬಾವಿ ಅಪಾಯ ಸ್ಥಿತಿಯಲ್ಲಿ ಇರುವ ಬಗ್ಗೆ ಪ್ರಸ್ತಾಪವಾಗಿತ್ತು.

Advertisement

ಈ ಬಗ್ಗೆ ಮುಖ್ಯಮಂತ್ರಿಗಳ ಟ್ವಿಟ್ಟರ್‌ ಖಾತೆಗೆ ಸಾರ್ವಜನಿಕರಿಂದ ದೂರು ಹಾಗೂ ವಿವಿಧ ಪತ್ರಿಕೆಗಳಲ್ಲಿ  ಬಂದ ವರದಿಯ ಬಗ್ಗೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಅವರು ಗಮನಿಸಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಚರ್ಚೆ ನಡೆದು ಮುಂದೆ ಇಂತಹ ಪ್ರಕರಣಗಳು ಮುಂದೆಂದೂ ಕಂಡು ಬರದ ರೀತಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌  ವ್ಯಾಪ್ತಿಯಲ್ಲಿ ವಿಫಲವಾದ ಕೊಳವೆಬಾವಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಮಪರ್ಕವಾಗಿ ಮುಚ್ಚಲು ಎಲ್ಲಾ ಗ್ರಾಮ ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಲಿಖಿತ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ತೆರೆದ ಕೊಳವೆಬಾವಿ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಗೆ ಟ್ವಿಟ್ಟರ್‌ ಮೂಲಕ ನೀಡಿರುವ ದೂರಿಗೆ ತಕ್ಷಣವೇ ಸ್ಪಂದಿಸಿ ಕಚೇರಿಯಿಂದಲೂ ಪರಿಶೀಲನೆ ನಡೆದಿತ್ತು. ಬಳಿಕ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.

Advertisement
ಜಾಹ್ನವಿ ಕಾಂಚೋಡು
ತೆರೆದ ಕೊಳವೆಬಾವಿಗಳು ಅಪಾಯವನ್ನು ಆಹ್ವಾನ ಮಾಡಿರುವುದು  ಈಗಾಗಲೇ ವಿವಿದೆಡೆ ಕಂಡುಬಂದಿದೆ. ಸುಳ್ಯ ತಾಲೂಕು ಹಾಗೂ ದ ಕ ಜಿಲ್ಲೆಯಲ್ಲಿ ಇಂತಹ ಅಪಾಯಗಳು ಆಗದಂತೆ ಕ್ರಮ ಆಗಲೇಬೇಕಿದೆ. ಸಾಮಾಜಿಕ ಜವಾಬ್ದಾರಿಯಿಂದ ಸೋಶಿಯಲ್‌ ಮೀಡಿಯಾ ಹಾಗೂ ಪತ್ರಿಕೆಗಳಲ್ಲಿ  ಬಂದ ಆಧಾರದಲ್ಲಿ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ವಿಷಯ ತರಲಾಗಿತ್ತು.  – ಜಾಹ್ನವಿ ಕಾಂಚೋಡು, ಅಧ್ಯಕ್ಷರು, ಸಾಮಾಜಿಕ ನ್ಯಾಯ ಸಮಿತಿ, ಸುಳ್ಯ ತಾಪಂ

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

22 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 day ago