Advertisement

ವಿಫಲ ಕೊಳವೆಬಾವಿ ಸಮರ್ಪಕವಾಗಿ ಮುಚ್ಚಲು ಗ್ರಾಮ ಪಂಚಾಯತ್ ಗಳಿಗೆ ತಾಪಂ ಸೂಚನೆ

Share

ಕುಡಿಯುವ ನೀರಿಗಾಗಿ ಕೊಳವೆಬಾವಿ ತೆರೆಯುವ ಸಂದರ್ಭ ವಿಫಲವಾದ ಕೊಳವೆಬಾವಿಗಳನ್ನು  ಸಮರ್ಪಕವಾಗಿ ಮುಚ್ಚಲು ಸುಳ್ಯ ತಾಲೂಕು ಪಂಚಾಯತ್‌ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ ಗಳಿಗೆ ಸೂಚನೆ ನೀಡಿದೆ.

ಸುಳ್ಯ ತಾಲೂಕು ಪಂಚಾಯತ್‌ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಮಿಲದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ವ್ಯವಸ್ಥೆಗೆ ಕೊಳವೆಬಾವಿ ತೆಗೆದು ಕೇಸಿಂಗ್‌ ಪೈಪ್‌ ಕೂಡಾ ತೆಗೆದು  ಕೊಳವೆಬಾವಿ ಅಪಾಯ ಸ್ಥಿತಿಯಲ್ಲಿ ಇರುವ ಬಗ್ಗೆ ಪ್ರಸ್ತಾಪವಾಗಿತ್ತು.

ಈ ಬಗ್ಗೆ ಮುಖ್ಯಮಂತ್ರಿಗಳ ಟ್ವಿಟ್ಟರ್‌ ಖಾತೆಗೆ ಸಾರ್ವಜನಿಕರಿಂದ ದೂರು ಹಾಗೂ ವಿವಿಧ ಪತ್ರಿಕೆಗಳಲ್ಲಿ  ಬಂದ ವರದಿಯ ಬಗ್ಗೆ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಅವರು ಗಮನಿಸಿ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಚರ್ಚೆ ನಡೆದು ಮುಂದೆ ಇಂತಹ ಪ್ರಕರಣಗಳು ಮುಂದೆಂದೂ ಕಂಡು ಬರದ ರೀತಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌  ವ್ಯಾಪ್ತಿಯಲ್ಲಿ ವಿಫಲವಾದ ಕೊಳವೆಬಾವಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಮಪರ್ಕವಾಗಿ ಮುಚ್ಚಲು ಎಲ್ಲಾ ಗ್ರಾಮ ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳು ವೈಯಕ್ತಿಕ ಗಮನಹರಿಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಲಿಖಿತ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ತೆರೆದ ಕೊಳವೆಬಾವಿ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಗೆ ಟ್ವಿಟ್ಟರ್‌ ಮೂಲಕ ನೀಡಿರುವ ದೂರಿಗೆ ತಕ್ಷಣವೇ ಸ್ಪಂದಿಸಿ ಕಚೇರಿಯಿಂದಲೂ ಪರಿಶೀಲನೆ ನಡೆದಿತ್ತು. ಬಳಿಕ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.

ಜಾಹ್ನವಿ ಕಾಂಚೋಡು
ತೆರೆದ ಕೊಳವೆಬಾವಿಗಳು ಅಪಾಯವನ್ನು ಆಹ್ವಾನ ಮಾಡಿರುವುದು  ಈಗಾಗಲೇ ವಿವಿದೆಡೆ ಕಂಡುಬಂದಿದೆ. ಸುಳ್ಯ ತಾಲೂಕು ಹಾಗೂ ದ ಕ ಜಿಲ್ಲೆಯಲ್ಲಿ ಇಂತಹ ಅಪಾಯಗಳು ಆಗದಂತೆ ಕ್ರಮ ಆಗಲೇಬೇಕಿದೆ. ಸಾಮಾಜಿಕ ಜವಾಬ್ದಾರಿಯಿಂದ ಸೋಶಿಯಲ್‌ ಮೀಡಿಯಾ ಹಾಗೂ ಪತ್ರಿಕೆಗಳಲ್ಲಿ  ಬಂದ ಆಧಾರದಲ್ಲಿ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ವಿಷಯ ತರಲಾಗಿತ್ತು.  – ಜಾಹ್ನವಿ ಕಾಂಚೋಡು, ಅಧ್ಯಕ್ಷರು, ಸಾಮಾಜಿಕ ನ್ಯಾಯ ಸಮಿತಿ, ಸುಳ್ಯ ತಾಪಂ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

7 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

14 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

23 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago