ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ಬೆಳಗ್ಗೆ 4.30 ರ ಸುಮಾರಿಗೆ ಹಳಿಯ ಮೇಲೆ ಮಣ್ಣು ಹಾಗೂ ಬಂಡೆಗಳು ಬಿದ್ದ ಕಾರಣ ಕೆಲವು ರೈಲು ಸಂಚಾರ ಸ್ಥಗಿತವಾಗಿತ್ತು. ತಕ್ಷಣವೇ ಬಂಡೆ ತೆರವು ಕಾರ್ಯ ನಡೆಸಲಾಗಿದೆ. ಬೆಳಗ್ಗೆ 9 ಗಂಟೆಯ ನಂತರ 20 ಕಿಮೀ ವೇಗದ ಮಿತಿಯೊಂದಿಗೆ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ಎಲ್ಲಾ ರೈಲುಗಳು ಮುಂದಿನ ಪ್ರಯಾಣವನ್ನು ಮುಂದುವರಿಸುತ್ತವೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಾಡಿ
ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel