ಹೈದ್ರಬಾದ್ನ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ ವೆಂಕಟರಾವ್ಪಲ್ಲಿ ಗ್ರಾಮದಲ್ಲಿ ಒಂಭತ್ತು ವರ್ಷದ ವಿದ್ಯಾರ್ಥಿ ಕೌಶಿಕ್, ಶಾಲೆಯಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ರಾತ್ರಿ ತನ್ನ ಕುಟುಂಬದೊಂದಿಗೆ ಪಟಾಕಿಗಳನ್ನು ಸಿಡಿಸಿದ ಹುಡುಗ ಕೌಶಿಕ್, ಲವಲವಿಕೆಯಿಂದ ಮರುದಿನ ಬೆಳಿಗ್ಗೆ ಎದ್ದು ಎಂದಿನಂತೆ ಶಾಲೆಗೆ ಹೋಗಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದವರೆಗೆ ತರಗತಿಗಳನ್ನು ಆಲಿಸಿದ ಹುಡುಗ, ಮಧ್ಯಾಹ್ನದ ಊಟಕ್ಕಾಗಿ ತನ್ನ ಸ್ನೇಹಿತರೊಂದಿಗೆ ಸರದಿಯಲ್ಲಿ ನಿಂತಿದ್ದನು. ಈ ವೇಳೆ ಕೌಶಿಕ್ ಇದ್ದಕ್ಕಿದ್ದಂತೆ ಸರತಿ ಸಾಲಿನಲ್ಲಿ ಕುಸಿದು ಬಿದ್ದಿದ್ದ. ತಕ್ಷಣವೇ ಶಿಕ್ಷಕರು ವಿದ್ಯಾರ್ಥಿಯನ್ನು ಗ್ರಾಮದ ವೈದ್ಯರ ಬಳಿಗೆ ಕರೆದೊಯ್ದರು , ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ. ಬಾಲಕ ಕೌಶಿಕ್ ಗೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದರು.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…