ಹೈದ್ರಬಾದ್ನ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ ವೆಂಕಟರಾವ್ಪಲ್ಲಿ ಗ್ರಾಮದಲ್ಲಿ ಒಂಭತ್ತು ವರ್ಷದ ವಿದ್ಯಾರ್ಥಿ ಕೌಶಿಕ್, ಶಾಲೆಯಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ರಾತ್ರಿ ತನ್ನ ಕುಟುಂಬದೊಂದಿಗೆ ಪಟಾಕಿಗಳನ್ನು ಸಿಡಿಸಿದ ಹುಡುಗ ಕೌಶಿಕ್, ಲವಲವಿಕೆಯಿಂದ ಮರುದಿನ ಬೆಳಿಗ್ಗೆ ಎದ್ದು ಎಂದಿನಂತೆ ಶಾಲೆಗೆ ಹೋಗಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದವರೆಗೆ ತರಗತಿಗಳನ್ನು ಆಲಿಸಿದ ಹುಡುಗ, ಮಧ್ಯಾಹ್ನದ ಊಟಕ್ಕಾಗಿ ತನ್ನ ಸ್ನೇಹಿತರೊಂದಿಗೆ ಸರದಿಯಲ್ಲಿ ನಿಂತಿದ್ದನು. ಈ ವೇಳೆ ಕೌಶಿಕ್ ಇದ್ದಕ್ಕಿದ್ದಂತೆ ಸರತಿ ಸಾಲಿನಲ್ಲಿ ಕುಸಿದು ಬಿದ್ದಿದ್ದ. ತಕ್ಷಣವೇ ಶಿಕ್ಷಕರು ವಿದ್ಯಾರ್ಥಿಯನ್ನು ಗ್ರಾಮದ ವೈದ್ಯರ ಬಳಿಗೆ ಕರೆದೊಯ್ದರು , ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ. ಬಾಲಕ ಕೌಶಿಕ್ ಗೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…