ಸೇನೆ ಸೇರುವ ಹಂಬಲ | ಕೆಲಸ ಮುಗಿಸಿ 10 ಕಿ.ಮೀ ಓಡುತ್ತಲೇ ಮನೆ ಸೇರುವ ಯುವಕ…!

March 21, 2022
2:05 PM

ಸೇನೆಗೆ ಸೇರಲು 19 ವರ್ಷದ  ಯುವಕನೊಬ್ಬ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋಮೀಟರ್ ಓಡುತ್ತಲೇ  ಮನೆ ಸೇರುತ್ತಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇವರ ಕತೆ ಆಸಕ್ತಿದಾಯಕ ಹಾಗೂ ಪಾಸಿಟಿವ್‌ ಸಂದೇಶ ನೀಡಿದೆ.

ಯುವಕನೊಬ್ಬ ಓಡುವ ವಿಡಿಯೋ ಭಾರಿ ವೈರಲ್ ಆಗಿದೆ. ಮೂಲತಃ ಉತ್ತರಾಖಂಡದವನಾದ ಪ್ರದೀಪ್ ಮೆಹ್ರಾ (19) ನೋಯ್ಡಾದಲ್ಲಿ ಮೆಕ್‌ಡೋನಾಲ್ಡ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋಮೀಟರ್ ಓಡುತ್ತಲೇ ಬರೋಲಾದಲ್ಲಿರುವ ಮನೆ ಸೇರುತ್ತಾರೆ. ಇದಕ್ಕೆ ಕಾರಣ ಆತ ಭಾರತೀಯ ಸೇನೆ ಸೇರಿಕೊಂಡು ದೇಶ ಸೇವೆ ಮಾಡಬೇಕೆಂಬ ಹಂಬಲ ಹೊಂದಿದ್ದಾನಂತೆ.

ಪ್ರದೀಪ್ ಈ ರೀತಿ ಓಡುತ್ತಿರುವುದನ್ನು ಗಮನಿಸಿದ ಕಾರಿನಲ್ಲಿದ್ದ ಚಲನಚಿತ್ರ ನಿರ್ಮಾಪಕ ಮತ್ತು ಲೇಖಕ ವಿನೋದ್ ಕಪ್ರಿ ಈ ಯುವಕನನ್ನು ಪ್ರಶ್ನಿಸಿದ್ದಾರೆ. ಈ ರೀತಿ ಓಡುತ್ತಿರುವುದು ಯಾಕೆ?, ಕಾರಿನಲ್ಲಿ ಮನೆಗೆ ಬಿಡುತ್ತೇನೆ ಎಂದು ವಿನಂತಿಸಿದ್ದಾರೆ. ಆದರೆ, ಇದು ಸೇನೆ ಸೇರಿಕೊಳ್ಳಲು ನಾನು ಮಾಡುತ್ತಿರುವ ಅಭ್ಯಾಸ ಎಂದು ಓಡುತ್ತಲೇ ಯುವಕ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದಾನೆ.

ಬೆಳಗ್ಗೆ ವ್ಯಾಯಾಮ, ಜಾಗಿಂಗ್, ಜಿಮ್​ಗೆ ಹೋಗಲು  ಸಮಯವಿಲ್ಲ. ಹಾಗಾಗಿ, ಮಧ್ಯರಾತ್ರಿ ವರೆಗೂ ಕೆಲಸ ಮಾಡುತ್ತೇನೆ. ನಂತರ ಮನೆಗೆ ಓಡುತ್ತಲೇ ಹಿಂತಿರುಗುತ್ತೇನೆ. ಸಿಗುವ ವೇತನದಲ್ಲೇ ತಾಯಿಯ ಆರೋಗ್ಯ ನೋಡಿಕೊಳ್ಳಬೇಕು, ಮನೆ ಖರ್ಚು ನಿಭಾಯಿಸಬೇಕು. ಜೊತೆಗೆ ನನ್ನ ದೇಹವನ್ನು ಫಿಟ್​ ಆಗಿ ಇಟ್ಟುಕೊಳ್ಳಬೇಕೆಂದು ಪ್ರತಿ ರಾತ್ರಿ ನಗರದ ರಸ್ತೆಗಳಲ್ಲಿ 10 ಕಿ.ಮೀ ಓಡುವ ಮೂಲಕ ಆರ್ಮಿ ಸೇರಿಕೊಳ್ಳಲು ತಯಾರಿ ನಡೆಸುತ್ತಿದ್ದೇನೆ ಅಂತಾನೆ ಈ ಯುವಕ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
June 7, 2026
1:56 PM
by: ಸಾಯಿಶೇಖರ್ ಕರಿಕಳ
“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror