Advertisement
ಸುದ್ದಿಗಳು

ಸೇನೆ ಸೇರುವ ಹಂಬಲ | ಕೆಲಸ ಮುಗಿಸಿ 10 ಕಿ.ಮೀ ಓಡುತ್ತಲೇ ಮನೆ ಸೇರುವ ಯುವಕ…!

Share

ಸೇನೆಗೆ ಸೇರಲು 19 ವರ್ಷದ  ಯುವಕನೊಬ್ಬ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋಮೀಟರ್ ಓಡುತ್ತಲೇ  ಮನೆ ಸೇರುತ್ತಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇವರ ಕತೆ ಆಸಕ್ತಿದಾಯಕ ಹಾಗೂ ಪಾಸಿಟಿವ್‌ ಸಂದೇಶ ನೀಡಿದೆ.

ಯುವಕನೊಬ್ಬ ಓಡುವ ವಿಡಿಯೋ ಭಾರಿ ವೈರಲ್ ಆಗಿದೆ. ಮೂಲತಃ ಉತ್ತರಾಖಂಡದವನಾದ ಪ್ರದೀಪ್ ಮೆಹ್ರಾ (19) ನೋಯ್ಡಾದಲ್ಲಿ ಮೆಕ್‌ಡೋನಾಲ್ಡ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋಮೀಟರ್ ಓಡುತ್ತಲೇ ಬರೋಲಾದಲ್ಲಿರುವ ಮನೆ ಸೇರುತ್ತಾರೆ. ಇದಕ್ಕೆ ಕಾರಣ ಆತ ಭಾರತೀಯ ಸೇನೆ ಸೇರಿಕೊಂಡು ದೇಶ ಸೇವೆ ಮಾಡಬೇಕೆಂಬ ಹಂಬಲ ಹೊಂದಿದ್ದಾನಂತೆ.

ಪ್ರದೀಪ್ ಈ ರೀತಿ ಓಡುತ್ತಿರುವುದನ್ನು ಗಮನಿಸಿದ ಕಾರಿನಲ್ಲಿದ್ದ ಚಲನಚಿತ್ರ ನಿರ್ಮಾಪಕ ಮತ್ತು ಲೇಖಕ ವಿನೋದ್ ಕಪ್ರಿ ಈ ಯುವಕನನ್ನು ಪ್ರಶ್ನಿಸಿದ್ದಾರೆ. ಈ ರೀತಿ ಓಡುತ್ತಿರುವುದು ಯಾಕೆ?, ಕಾರಿನಲ್ಲಿ ಮನೆಗೆ ಬಿಡುತ್ತೇನೆ ಎಂದು ವಿನಂತಿಸಿದ್ದಾರೆ. ಆದರೆ, ಇದು ಸೇನೆ ಸೇರಿಕೊಳ್ಳಲು ನಾನು ಮಾಡುತ್ತಿರುವ ಅಭ್ಯಾಸ ಎಂದು ಓಡುತ್ತಲೇ ಯುವಕ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದಾನೆ.

ಬೆಳಗ್ಗೆ ವ್ಯಾಯಾಮ, ಜಾಗಿಂಗ್, ಜಿಮ್​ಗೆ ಹೋಗಲು  ಸಮಯವಿಲ್ಲ. ಹಾಗಾಗಿ, ಮಧ್ಯರಾತ್ರಿ ವರೆಗೂ ಕೆಲಸ ಮಾಡುತ್ತೇನೆ. ನಂತರ ಮನೆಗೆ ಓಡುತ್ತಲೇ ಹಿಂತಿರುಗುತ್ತೇನೆ. ಸಿಗುವ ವೇತನದಲ್ಲೇ ತಾಯಿಯ ಆರೋಗ್ಯ ನೋಡಿಕೊಳ್ಳಬೇಕು, ಮನೆ ಖರ್ಚು ನಿಭಾಯಿಸಬೇಕು. ಜೊತೆಗೆ ನನ್ನ ದೇಹವನ್ನು ಫಿಟ್​ ಆಗಿ ಇಟ್ಟುಕೊಳ್ಳಬೇಕೆಂದು ಪ್ರತಿ ರಾತ್ರಿ ನಗರದ ರಸ್ತೆಗಳಲ್ಲಿ 10 ಕಿ.ಮೀ ಓಡುವ ಮೂಲಕ ಆರ್ಮಿ ಸೇರಿಕೊಳ್ಳಲು ತಯಾರಿ ನಡೆಸುತ್ತಿದ್ದೇನೆ ಅಂತಾನೆ ಈ ಯುವಕ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

34 minutes ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

49 minutes ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

6 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

9 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

13 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

13 hours ago