Advertisement
ಸುದ್ದಿಗಳು

ಸೇನೆ ಸೇರುವ ಹಂಬಲ | ಕೆಲಸ ಮುಗಿಸಿ 10 ಕಿ.ಮೀ ಓಡುತ್ತಲೇ ಮನೆ ಸೇರುವ ಯುವಕ…!

Share

ಸೇನೆಗೆ ಸೇರಲು 19 ವರ್ಷದ  ಯುವಕನೊಬ್ಬ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋಮೀಟರ್ ಓಡುತ್ತಲೇ  ಮನೆ ಸೇರುತ್ತಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇವರ ಕತೆ ಆಸಕ್ತಿದಾಯಕ ಹಾಗೂ ಪಾಸಿಟಿವ್‌ ಸಂದೇಶ ನೀಡಿದೆ.

Advertisement

ಯುವಕನೊಬ್ಬ ಓಡುವ ವಿಡಿಯೋ ಭಾರಿ ವೈರಲ್ ಆಗಿದೆ. ಮೂಲತಃ ಉತ್ತರಾಖಂಡದವನಾದ ಪ್ರದೀಪ್ ಮೆಹ್ರಾ (19) ನೋಯ್ಡಾದಲ್ಲಿ ಮೆಕ್‌ಡೋನಾಲ್ಡ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋಮೀಟರ್ ಓಡುತ್ತಲೇ ಬರೋಲಾದಲ್ಲಿರುವ ಮನೆ ಸೇರುತ್ತಾರೆ. ಇದಕ್ಕೆ ಕಾರಣ ಆತ ಭಾರತೀಯ ಸೇನೆ ಸೇರಿಕೊಂಡು ದೇಶ ಸೇವೆ ಮಾಡಬೇಕೆಂಬ ಹಂಬಲ ಹೊಂದಿದ್ದಾನಂತೆ.

ಪ್ರದೀಪ್ ಈ ರೀತಿ ಓಡುತ್ತಿರುವುದನ್ನು ಗಮನಿಸಿದ ಕಾರಿನಲ್ಲಿದ್ದ ಚಲನಚಿತ್ರ ನಿರ್ಮಾಪಕ ಮತ್ತು ಲೇಖಕ ವಿನೋದ್ ಕಪ್ರಿ ಈ ಯುವಕನನ್ನು ಪ್ರಶ್ನಿಸಿದ್ದಾರೆ. ಈ ರೀತಿ ಓಡುತ್ತಿರುವುದು ಯಾಕೆ?, ಕಾರಿನಲ್ಲಿ ಮನೆಗೆ ಬಿಡುತ್ತೇನೆ ಎಂದು ವಿನಂತಿಸಿದ್ದಾರೆ. ಆದರೆ, ಇದು ಸೇನೆ ಸೇರಿಕೊಳ್ಳಲು ನಾನು ಮಾಡುತ್ತಿರುವ ಅಭ್ಯಾಸ ಎಂದು ಓಡುತ್ತಲೇ ಯುವಕ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದಾನೆ.

ಬೆಳಗ್ಗೆ ವ್ಯಾಯಾಮ, ಜಾಗಿಂಗ್, ಜಿಮ್​ಗೆ ಹೋಗಲು  ಸಮಯವಿಲ್ಲ. ಹಾಗಾಗಿ, ಮಧ್ಯರಾತ್ರಿ ವರೆಗೂ ಕೆಲಸ ಮಾಡುತ್ತೇನೆ. ನಂತರ ಮನೆಗೆ ಓಡುತ್ತಲೇ ಹಿಂತಿರುಗುತ್ತೇನೆ. ಸಿಗುವ ವೇತನದಲ್ಲೇ ತಾಯಿಯ ಆರೋಗ್ಯ ನೋಡಿಕೊಳ್ಳಬೇಕು, ಮನೆ ಖರ್ಚು ನಿಭಾಯಿಸಬೇಕು. ಜೊತೆಗೆ ನನ್ನ ದೇಹವನ್ನು ಫಿಟ್​ ಆಗಿ ಇಟ್ಟುಕೊಳ್ಳಬೇಕೆಂದು ಪ್ರತಿ ರಾತ್ರಿ ನಗರದ ರಸ್ತೆಗಳಲ್ಲಿ 10 ಕಿ.ಮೀ ಓಡುವ ಮೂಲಕ ಆರ್ಮಿ ಸೇರಿಕೊಳ್ಳಲು ತಯಾರಿ ನಡೆಸುತ್ತಿದ್ದೇನೆ ಅಂತಾನೆ ಈ ಯುವಕ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

23 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

2 days ago