Advertisement
ಸುದ್ದಿಗಳು

ಸೇನೆ ಸೇರುವ ಹಂಬಲ | ಕೆಲಸ ಮುಗಿಸಿ 10 ಕಿ.ಮೀ ಓಡುತ್ತಲೇ ಮನೆ ಸೇರುವ ಯುವಕ…!

Share

ಸೇನೆಗೆ ಸೇರಲು 19 ವರ್ಷದ  ಯುವಕನೊಬ್ಬ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋಮೀಟರ್ ಓಡುತ್ತಲೇ  ಮನೆ ಸೇರುತ್ತಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇವರ ಕತೆ ಆಸಕ್ತಿದಾಯಕ ಹಾಗೂ ಪಾಸಿಟಿವ್‌ ಸಂದೇಶ ನೀಡಿದೆ.

ಯುವಕನೊಬ್ಬ ಓಡುವ ವಿಡಿಯೋ ಭಾರಿ ವೈರಲ್ ಆಗಿದೆ. ಮೂಲತಃ ಉತ್ತರಾಖಂಡದವನಾದ ಪ್ರದೀಪ್ ಮೆಹ್ರಾ (19) ನೋಯ್ಡಾದಲ್ಲಿ ಮೆಕ್‌ಡೋನಾಲ್ಡ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋಮೀಟರ್ ಓಡುತ್ತಲೇ ಬರೋಲಾದಲ್ಲಿರುವ ಮನೆ ಸೇರುತ್ತಾರೆ. ಇದಕ್ಕೆ ಕಾರಣ ಆತ ಭಾರತೀಯ ಸೇನೆ ಸೇರಿಕೊಂಡು ದೇಶ ಸೇವೆ ಮಾಡಬೇಕೆಂಬ ಹಂಬಲ ಹೊಂದಿದ್ದಾನಂತೆ.

ಪ್ರದೀಪ್ ಈ ರೀತಿ ಓಡುತ್ತಿರುವುದನ್ನು ಗಮನಿಸಿದ ಕಾರಿನಲ್ಲಿದ್ದ ಚಲನಚಿತ್ರ ನಿರ್ಮಾಪಕ ಮತ್ತು ಲೇಖಕ ವಿನೋದ್ ಕಪ್ರಿ ಈ ಯುವಕನನ್ನು ಪ್ರಶ್ನಿಸಿದ್ದಾರೆ. ಈ ರೀತಿ ಓಡುತ್ತಿರುವುದು ಯಾಕೆ?, ಕಾರಿನಲ್ಲಿ ಮನೆಗೆ ಬಿಡುತ್ತೇನೆ ಎಂದು ವಿನಂತಿಸಿದ್ದಾರೆ. ಆದರೆ, ಇದು ಸೇನೆ ಸೇರಿಕೊಳ್ಳಲು ನಾನು ಮಾಡುತ್ತಿರುವ ಅಭ್ಯಾಸ ಎಂದು ಓಡುತ್ತಲೇ ಯುವಕ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದಾನೆ.

ಬೆಳಗ್ಗೆ ವ್ಯಾಯಾಮ, ಜಾಗಿಂಗ್, ಜಿಮ್​ಗೆ ಹೋಗಲು  ಸಮಯವಿಲ್ಲ. ಹಾಗಾಗಿ, ಮಧ್ಯರಾತ್ರಿ ವರೆಗೂ ಕೆಲಸ ಮಾಡುತ್ತೇನೆ. ನಂತರ ಮನೆಗೆ ಓಡುತ್ತಲೇ ಹಿಂತಿರುಗುತ್ತೇನೆ. ಸಿಗುವ ವೇತನದಲ್ಲೇ ತಾಯಿಯ ಆರೋಗ್ಯ ನೋಡಿಕೊಳ್ಳಬೇಕು, ಮನೆ ಖರ್ಚು ನಿಭಾಯಿಸಬೇಕು. ಜೊತೆಗೆ ನನ್ನ ದೇಹವನ್ನು ಫಿಟ್​ ಆಗಿ ಇಟ್ಟುಕೊಳ್ಳಬೇಕೆಂದು ಪ್ರತಿ ರಾತ್ರಿ ನಗರದ ರಸ್ತೆಗಳಲ್ಲಿ 10 ಕಿ.ಮೀ ಓಡುವ ಮೂಲಕ ಆರ್ಮಿ ಸೇರಿಕೊಳ್ಳಲು ತಯಾರಿ ನಡೆಸುತ್ತಿದ್ದೇನೆ ಅಂತಾನೆ ಈ ಯುವಕ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 hour ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

8 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

11 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

20 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

20 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

21 hours ago