ಒಂದು ಕೈಯಲ್ಲಿ ಕತ್ತಿ …ಇನ್ನೊಂದು ಕೈಯಲ್ಲಿ ಹಗ್ಗ…! ಸರ ಸರನೆ ಅಡಿಕೆ ಮರ ಏರುವ ಬಾಲಕ..!, ನಿಮಿಷದಲ್ಲಿ ಅಡಿಕೆ ಕೊಯ್ಲು ಮಾಡಿ ಮುಗಿಸುವ ಚತುರ..!. ಇದು ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿ ಸಚೇತ ದಿವಸ್ಪತಿ ಹೆಗಡೆ.
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿಯಾಗಿರುವ ಸಚೇತ ದಿವಸ್ಪತಿ ಹೆಗಡೆ ಇನ್ನೂ ಬಾಲಕ. ಸಣ್ಣ ವಯಸ್ಸಿನಲ್ಲಿಯೇ ಅಡಿಕೆ ಮರ ಏರಿ ಕೊನೆ ಕೊಯ್ಯುವುದು ರೂಢಿ ಮಾಡಿಕೊಂಡಿದ್ದಾನೆ. ಈತ 20 ರಿಂದ 50 ಎತ್ತರದ ಮರ ಏರಿ ಕೊನೆ ಕೊಯ್ದು ನೇಣು ಬಿಡುತ್ತಾನೆ. ಇದಕ್ಕೆ ಮನೆಯವರು ಕೊಡ ಬೆಂಬಲಾಗಿ ನಿಂತಿದ್ದು, ಇದೀಗ ಈತ ಕ್ವಿಂಟಾಲ್ ಗಟ್ಟಲೇ ಅಡಿಕೆ ಕೊಯ್ಯುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾನೆ.
ಸಣ್ಣ ಪುಟ್ಟ ಗಿಡಗಳ ಕೊನೆ ಕೊಯ್ಲು ಮಾಡಲು ಆರಂಭ ಮಾಡಿ ಇದೀಗ ಎಲ್ಲರಂತೆಯೇ ಕೊನೆ ಕೊಯ್ಯುತ್ತಿರುವುದು ಮನೆಯವರಿಗೂ ಸಹಕಾರಿಯಾಗಿದೆ. ಮಗನ ಕೃಷಿ ಕಾಯಕ ನಮಗೂ ಖಷಿ ನೀಡುತ್ತಿದ್ದು, ಆತನ ಕೃಷಿ ಬಗೆಗಿನ ಒಲವು ಹೆಮ್ಮೆಯಾಗಿದೆ ಎನ್ನುತ್ತಾರೆ ಸಚೇತ ಹೆಗಡೆ ತಾಯಿ ಶ್ವೇತಾ ಹೆಗಡೆ.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…