ಒಂದು ಕೈಯಲ್ಲಿ ಕತ್ತಿ …ಇನ್ನೊಂದು ಕೈಯಲ್ಲಿ ಹಗ್ಗ…! ಸರ ಸರನೆ ಅಡಿಕೆ ಮರ ಏರುವ ಬಾಲಕ..!, ನಿಮಿಷದಲ್ಲಿ ಅಡಿಕೆ ಕೊಯ್ಲು ಮಾಡಿ ಮುಗಿಸುವ ಚತುರ..!. ಇದು ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿ ಸಚೇತ ದಿವಸ್ಪತಿ ಹೆಗಡೆ.
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿಯಾಗಿರುವ ಸಚೇತ ದಿವಸ್ಪತಿ ಹೆಗಡೆ ಇನ್ನೂ ಬಾಲಕ. ಸಣ್ಣ ವಯಸ್ಸಿನಲ್ಲಿಯೇ ಅಡಿಕೆ ಮರ ಏರಿ ಕೊನೆ ಕೊಯ್ಯುವುದು ರೂಢಿ ಮಾಡಿಕೊಂಡಿದ್ದಾನೆ. ಈತ 20 ರಿಂದ 50 ಎತ್ತರದ ಮರ ಏರಿ ಕೊನೆ ಕೊಯ್ದು ನೇಣು ಬಿಡುತ್ತಾನೆ. ಇದಕ್ಕೆ ಮನೆಯವರು ಕೊಡ ಬೆಂಬಲಾಗಿ ನಿಂತಿದ್ದು, ಇದೀಗ ಈತ ಕ್ವಿಂಟಾಲ್ ಗಟ್ಟಲೇ ಅಡಿಕೆ ಕೊಯ್ಯುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾನೆ.
ಸಣ್ಣ ಪುಟ್ಟ ಗಿಡಗಳ ಕೊನೆ ಕೊಯ್ಲು ಮಾಡಲು ಆರಂಭ ಮಾಡಿ ಇದೀಗ ಎಲ್ಲರಂತೆಯೇ ಕೊನೆ ಕೊಯ್ಯುತ್ತಿರುವುದು ಮನೆಯವರಿಗೂ ಸಹಕಾರಿಯಾಗಿದೆ. ಮಗನ ಕೃಷಿ ಕಾಯಕ ನಮಗೂ ಖಷಿ ನೀಡುತ್ತಿದ್ದು, ಆತನ ಕೃಷಿ ಬಗೆಗಿನ ಒಲವು ಹೆಮ್ಮೆಯಾಗಿದೆ ಎನ್ನುತ್ತಾರೆ ಸಚೇತ ಹೆಗಡೆ ತಾಯಿ ಶ್ವೇತಾ ಹೆಗಡೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…