ಒಂದು ಕೈಯಲ್ಲಿ ಕತ್ತಿ …ಇನ್ನೊಂದು ಕೈಯಲ್ಲಿ ಹಗ್ಗ…! ಸರ ಸರನೆ ಅಡಿಕೆ ಮರ ಏರುವ ಬಾಲಕ..!, ನಿಮಿಷದಲ್ಲಿ ಅಡಿಕೆ ಕೊಯ್ಲು ಮಾಡಿ ಮುಗಿಸುವ ಚತುರ..!. ಇದು ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿ ಸಚೇತ ದಿವಸ್ಪತಿ ಹೆಗಡೆ.
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿಯಾಗಿರುವ ಸಚೇತ ದಿವಸ್ಪತಿ ಹೆಗಡೆ ಇನ್ನೂ ಬಾಲಕ. ಸಣ್ಣ ವಯಸ್ಸಿನಲ್ಲಿಯೇ ಅಡಿಕೆ ಮರ ಏರಿ ಕೊನೆ ಕೊಯ್ಯುವುದು ರೂಢಿ ಮಾಡಿಕೊಂಡಿದ್ದಾನೆ. ಈತ 20 ರಿಂದ 50 ಎತ್ತರದ ಮರ ಏರಿ ಕೊನೆ ಕೊಯ್ದು ನೇಣು ಬಿಡುತ್ತಾನೆ. ಇದಕ್ಕೆ ಮನೆಯವರು ಕೊಡ ಬೆಂಬಲಾಗಿ ನಿಂತಿದ್ದು, ಇದೀಗ ಈತ ಕ್ವಿಂಟಾಲ್ ಗಟ್ಟಲೇ ಅಡಿಕೆ ಕೊಯ್ಯುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾನೆ.
ಸಣ್ಣ ಪುಟ್ಟ ಗಿಡಗಳ ಕೊನೆ ಕೊಯ್ಲು ಮಾಡಲು ಆರಂಭ ಮಾಡಿ ಇದೀಗ ಎಲ್ಲರಂತೆಯೇ ಕೊನೆ ಕೊಯ್ಯುತ್ತಿರುವುದು ಮನೆಯವರಿಗೂ ಸಹಕಾರಿಯಾಗಿದೆ. ಮಗನ ಕೃಷಿ ಕಾಯಕ ನಮಗೂ ಖಷಿ ನೀಡುತ್ತಿದ್ದು, ಆತನ ಕೃಷಿ ಬಗೆಗಿನ ಒಲವು ಹೆಮ್ಮೆಯಾಗಿದೆ ಎನ್ನುತ್ತಾರೆ ಸಚೇತ ಹೆಗಡೆ ತಾಯಿ ಶ್ವೇತಾ ಹೆಗಡೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…