ಒಂದು ಕೈಯಲ್ಲಿ ಕತ್ತಿ …ಇನ್ನೊಂದು ಕೈಯಲ್ಲಿ ಹಗ್ಗ…! ಸರ ಸರನೆ ಅಡಿಕೆ ಮರ ಏರುವ ಬಾಲಕ..!, ನಿಮಿಷದಲ್ಲಿ ಅಡಿಕೆ ಕೊಯ್ಲು ಮಾಡಿ ಮುಗಿಸುವ ಚತುರ..!. ಇದು ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿ ಸಚೇತ ದಿವಸ್ಪತಿ ಹೆಗಡೆ.
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿಯಾಗಿರುವ ಸಚೇತ ದಿವಸ್ಪತಿ ಹೆಗಡೆ ಇನ್ನೂ ಬಾಲಕ. ಸಣ್ಣ ವಯಸ್ಸಿನಲ್ಲಿಯೇ ಅಡಿಕೆ ಮರ ಏರಿ ಕೊನೆ ಕೊಯ್ಯುವುದು ರೂಢಿ ಮಾಡಿಕೊಂಡಿದ್ದಾನೆ. ಈತ 20 ರಿಂದ 50 ಎತ್ತರದ ಮರ ಏರಿ ಕೊನೆ ಕೊಯ್ದು ನೇಣು ಬಿಡುತ್ತಾನೆ. ಇದಕ್ಕೆ ಮನೆಯವರು ಕೊಡ ಬೆಂಬಲಾಗಿ ನಿಂತಿದ್ದು, ಇದೀಗ ಈತ ಕ್ವಿಂಟಾಲ್ ಗಟ್ಟಲೇ ಅಡಿಕೆ ಕೊಯ್ಯುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾನೆ.
ಸಣ್ಣ ಪುಟ್ಟ ಗಿಡಗಳ ಕೊನೆ ಕೊಯ್ಲು ಮಾಡಲು ಆರಂಭ ಮಾಡಿ ಇದೀಗ ಎಲ್ಲರಂತೆಯೇ ಕೊನೆ ಕೊಯ್ಯುತ್ತಿರುವುದು ಮನೆಯವರಿಗೂ ಸಹಕಾರಿಯಾಗಿದೆ. ಮಗನ ಕೃಷಿ ಕಾಯಕ ನಮಗೂ ಖಷಿ ನೀಡುತ್ತಿದ್ದು, ಆತನ ಕೃಷಿ ಬಗೆಗಿನ ಒಲವು ಹೆಮ್ಮೆಯಾಗಿದೆ ಎನ್ನುತ್ತಾರೆ ಸಚೇತ ಹೆಗಡೆ ತಾಯಿ ಶ್ವೇತಾ ಹೆಗಡೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…