ಎರಡು ದಿನಗಳಿಂದ ಸುಳ್ಯದ ಶಾಲಾ ವಿದ್ಯಾರ್ಥಿಯೊಬ್ಬ ಭ್ರಷ್ಟಾಚಾರದ ಬಗ್ಗೆ ಸುಳ್ಯದ ಸುದ್ದಿ ಬಿಡುಗಡೆ ಪತ್ರಿಕೆಗೆ ಬರೆದ ಪತ್ರ ವೈರಲ್ ಆಗಿತ್ತು. ಮಾಜಿ ಸಚಿವ ಸುರೇಶ್ ಕುಮಾರ್ ಸಹಿತ ಹಲವರು ಬಾಲಕ ಭ್ರಷ್ಟಾಚಾರದ ಬಗ್ಗೆ ಬರೆದ ಪತ್ರವನ್ನು ಶ್ಲಾಘಿಸಿದ್ದರು. ಬಾಲಕನ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ಇದೀಗ ಬಾಲಕನ ತಂದೆ ಸ್ಪಷ್ಟನೆ ನೀಡಿರುವುದು ಹಾಗೂ ಆ ಸ್ಪಷ್ಟನೆಯಲ್ಲಿ ಇರುವ ಭಾವವು ಸಮಾಜದ ವ್ಯವಸ್ಥೆಯ ಕನ್ನಡಿಯಾಗಿದೆ. ಶಾಲಾ ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಭಾವನೆಗಳ ಪರ ನಿಲ್ಲುವವರು ಯಾರು ಎಂಬುದೇ ಈಗ ಪ್ರಶ್ನೆಯಾಗಿದೆ. ಬಾಲಕನ ತಂದೆ ನೀಡಿರುವ ಸ್ಪಷ್ಟನೆ ಹೀಗಿದೆ…
ನಾನು ಹರಿಪ್ರಸಾದ್, ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಬಾಲಕನ ತಂದೆ. ಈ ಮೊದಲು ನನ್ನ ಮಗ ಸುದ್ದಿಬಿಡುಗಡೆ ಪತ್ರಿಕೆಗೆ ಪತ್ರ ಬರೆದಿದ್ದು,ಈಗ್ಗೆ ಪ್ರಕಟಗೊಂದಿರುತ್ತದೆ..ಇದರಲ್ಲಿ ನನ್ನ ಪಾತ್ರ ಇಲ್ಲ.. ಈ ಪತ್ರವನ್ನು ನನ್ನ ಮಗ ಬರೆದಿರುತ್ತಾನೆ.
ಇದಕ್ಕೆ ಮೊದಲು ಅವನು ಪೈಲಾರು ಶಾಲೆಯಲ್ಲಿ ಓದುತ್ತಿದ್ದಾಗ ಇದೇ ಭ್ರಷ್ಟಾಚಾರದ ಬಗ್ಗೆ ಸುದ್ದಿ ಬಿಡುಗಡೆ ಪತ್ರಿಕೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದ. ಆಗ ಪ್ರಬಂಧದಲ್ಲಿ ಮಾಲಾಲ, ಗ್ರೇಟಾ ತನ್ಬೆರ್ಗ್ ರಂತ ಬಾಲ ಕ್ರಾಂತಿಕಾರಿಗಳ ಬಗ್ಗೆಯು ಬರೆದಿತ್ತು.. ಸುದ್ದಿ ಬಿಡುಗಡೆಯ ಈ ಪ್ರಬಂಧ ಸ್ಪರ್ಧೆ ಮತ್ತು ಎಲ್ಲೆಲ್ಲೂ ಕಾಣಸಿಗುವ ಸುದ್ದಿ ಬಿಡುಗಡೆಯ ಭ್ರಷ್ಟಾಚಾರದ ವಿರುದ್ಧದ ಸಣ್ಣ ಸಣ್ಣ ಬ್ಯಾನರ್ಗಳೂ ಅವನಿಗೆ ಪ್ರೇರಣೆ ನೀಡಿರಬಹುದು.
ಅವನ ಹಾಗೂ ಸಹೋದರ ಪತ್ರಗಳ ಮೂಲಕ ಸಂಭಾಷಣೆ ನಡೆಸುವುದು ಸಾಮಾನ್ಯವಾಗಿದ್ದು, ಪತ್ರ ಬರೆಯುವುದು ಅವನ ಒಂದು ಹವ್ಯಾಸ.
ಇನ್ನು ದೇವಚಳ್ಳ ಶಾಲೆಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ, SDMC ಯವರು ಈಗಾಗಲೇ ಸ್ವಯಂ ವಿವರಣಾತ್ಮಕವಾಗಿ ಹೇಳಿಕೆಯಲ್ಲಿ ಕೊಟ್ಟಿರುವುದರಿಂದ ನಾನು ಯಾವುದೇ ರೀತಿಯ ಹೇಳಿಕೆ ಕೊಡುವ ಅವಶ್ಯಕತೆ ಇರುವುದಿಲ್ಲ.
ಈ ವಾತಾವರಣದಿಂದ ಬದಲಾವಣೆ ಪಡೆಯಲು ನಾನು 2020 ವರ್ಷದಲ್ಲಿ ನನ್ನ ಮಕ್ಕಳನ್ನು ಆ ಶಾಲೆಯಿಂದ ತೆಗೆದು ಬೇರೆ ಶಾಲೆಗೆ ಹಾಕಿದ್ದು,ಪ್ರಸ್ತುತ ನನಗೂ ಶಾಲೆಗೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ ಮತ್ತು ಅಲ್ಲಿ 2020ರ ನಂತರ ನಡೆದ ಘಟನೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರುವುದಿಲ್ಲ
ಆದರೆ,ಈ ಮಾತನ್ನು ಆಡು ಭಾಷೆಯಲ್ಲಿ ಮಗನಿಗೆ ಹೇಳಿದ್ದು ಹೌದು.. 1 ಲಕ್ಷಕ್ಕೆ ಯಾರು ಬರ್ಲಿಲ್ಲ,ಇನ್ನೂ 500 ಕ್ಕೆ ಯಾರಾದ್ರೂ ಬರುತ್ತಾರಾ ಎಂದು… ಭ್ರಷ್ಟಾಚಾರದ ಬಗ್ಗೆ ಮಾತು ಬರುವಾಗ ನಮ್ಮ ಸುತ್ತಮುತ್ತಲಿನ, ಹತ್ತಿರದ, ಸುಲಭವಾಗಿ ಅರ್ಥವಾಗುವ ವಿಷಯ ಎಲ್ಲರೂ ರೆಫರ್ ಮಾಡುವಂತೆ, ನಾನು ಮಾಡಿದ್ದೆ. ಇನ್ನೂ ಈ ಘಟನೆಗಳ ಬಗ್ಗೆ ಯಾವುದೇ ರೀತಿಯ ಚರ್ಚೆ ಮಾಡಲು ಇಚ್ಛೆ ಪಡುವುದಿಲ್ಲ..
ಈ ಹೇಳಿಕೆಯು ಮೇಲೆ ನಡೆದ ಘಟನೆಯ ಬಗ್ಗೆ ಹಾಗೂ ಶಾಲಾ SDMC ಮೀಟಿಂಗ್ ನ ಹಾಗೂ ಸಮಾಜದ ಎಲ್ಲರ ಪ್ರಶ್ನೆಗಳಿಗೆ ಉತ್ತರಿಸುವ ಸಲುವಾಗಿ ಮೊದಲನೆಯದಾಗಿ ಹಾಗೂ ಕೊನೆಯದಾಗಿ ಕೊಡುತ್ತಿದ್ದೇನೆ.ಎಲ್ಲರೂ ನಡೆದ್ದದ್ದನ್ನು ಮರೆತು ಮುಂದೆ ಸಾಗೋಣ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…