ಐಷಾರಾಮಿ ವಾಹನ, ಹೆಚ್ಚು ಆದಾಯ, ಸರ್ಕಾರಿ ನೌಕರಿ, ಹೆಚ್ಚು ಜಾಗ ಮತ್ತು ಭೂಮಿ ಇರುವ ಕುಟುಂಬಗಳ ಕಾರ್ಡ್ಗಳನ್ನೂ ಗುರುತಿಸಿಕೊಂಡು ಆದಾಯ ತೆರಿಗೆ ಇಲಾಖೆಯು ಪ್ರತಿ ವರ್ಷ ತೆರಿಗೆ ಸಲ್ಲಿಸುತ್ತಿರುವವರ ವಿವರಗಳನ್ನು ಆಹಾರ ಇಲಾಖೆಗೆ ಒದಗಿಸುತ್ತಿದೆ. ಈ ಕಾರಣದಿಂದ ಬಿಪಿಎಲ್ಗಳನ್ನು ಅನರ್ಹ ಎಂಬ ಪಟ್ಟಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಹೀಗಾಗಿ ಕೆಲವು ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ರಾಜ್ಯಾದ್ಯಂತ ತೀವ್ರಗೊಂಡಿದೆ. ಈಗಾಗಲೇ ಬೆಂಗಳೂರು, ಹಾವೇರಿ, ಧಾರವಾಡ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾವಿರಾರು ಕಾರ್ಡ್ಗಳು ರದ್ದಾಗಿವೆ.
ಒಂದು ವೇಳೆ ಬಿಪಿಎಲ್ ಕಾರ್ಡ್ಗಳನ್ನು ಉಳಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿರುವವರು ಈ ಷರತ್ತುಗಳನ್ನು ಒಳಗೊಂಡಿರಬೇಕು.
ಸರ್ಕಾರದ ಈ ನಿಯಮಗಳಿಂದ ಕೆಲವೊಮ್ಮೆ ಅನರ್ಹರನ್ನು ತೆಗೆದುಹಾಕೊ ನಿಜವಾದ ಬಡವರ ಕಾರ್ಡ್ ರದ್ದುಗಿಳಿಸಿರುತ್ತದೆ. ಒಂದುವೇಳೆ ಈ ಎಲ್ಲಾ ಷರತ್ತುಗಳು ಒಳಗೊಂಡಿದ್ದರೂ, ಬಿಪಿಎಲ್ ಕಾರ್ಡ್ ಅನರ್ಹ ಎಂದು ರದ್ದಾಗಿದೆ ಎಂದರೆ ಸಮೀಪದ ಆಹಾರ ಇಲಾಖೆ ಕಚೇರಿ ಅಥವಾ ತಾಲೂಕು ಕಚೇರಿಗೆ ದೂರು ಸಲ್ಲಿಸಬಹುದು.
ನಿಮ್ಮ ಕಾರ್ಡ್ ರದ್ದು ಆಗಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಈ ವಿಧಾನ ನೋಡಿ: https://mahitikanaja.karnataka.gov.in/FCS/MyRationCard ಈ ಲಿಂಕ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ತದನಂತರ ರೇಷನ್ ಕಾರ್ಡ್ ಸಂಖ್ಯೆಯನ್ನು ಟೈಮ್ ಮಾಡಿ ಕ್ಲಿಕ್ ಮಾಡಿದರೆ ಸಾಕು. ಕಾರ್ಡ್ ಸ್ಥಿತಿ ಆಕ್ಟೀವ್ ಎಂದು ಕಾಣಿಸಿದರೆ ನಿಮ್ಮ ಕಾರ್ಡ್ ಸುರಕ್ಷಿತ, ಇನ್ ಆಕ್ಟೀವ್ ಎಂದು ಕಾಣಿಸಿಕೊಂಡರೆ ರದ್ದು ಆಗಿದೆ ಎಂದು ಅರ್ಥ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…