Advertisement
ರಾಜ್ಯ

ಬಿಪಿಎಲ್ ಕಾರ್ಡ್‍ದಾರರೇ ಎಚ್ಚರಿಕೆ : ಅನರ್ಹ ಕಾರ್ಡ್‍ಗಳ ರದ್ದು

Share

ಐಷಾರಾಮಿ ವಾಹನ, ಹೆಚ್ಚು ಆದಾಯ, ಸರ್ಕಾರಿ ನೌಕರಿ, ಹೆಚ್ಚು ಜಾಗ ಮತ್ತು ಭೂಮಿ ಇರುವ ಕುಟುಂಬಗಳ ಕಾರ್ಡ್‍ಗಳನ್ನೂ ಗುರುತಿಸಿಕೊಂಡು ಆದಾಯ ತೆರಿಗೆ ಇಲಾಖೆಯು ಪ್ರತಿ ವರ್ಷ ತೆರಿಗೆ ಸಲ್ಲಿಸುತ್ತಿರುವವರ ವಿವರಗಳನ್ನು ಆಹಾರ ಇಲಾಖೆಗೆ ಒದಗಿಸುತ್ತಿದೆ. ಈ ಕಾರಣದಿಂದ ಬಿಪಿಎಲ್‍ಗಳನ್ನು ಅನರ್ಹ ಎಂಬ ಪಟ್ಟಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಹೀಗಾಗಿ ಕೆಲವು ಬಿಪಿಎಲ್ ರೇಷನ್ ಕಾರ್ಡ್‍ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ರಾಜ್ಯಾದ್ಯಂತ ತೀವ್ರಗೊಂಡಿದೆ. ಈಗಾಗಲೇ ಬೆಂಗಳೂರು, ಹಾವೇರಿ, ಧಾರವಾಡ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾವಿರಾರು ಕಾರ್ಡ್‍ಗಳು ರದ್ದಾಗಿವೆ.

ಒಂದು ವೇಳೆ ಬಿಪಿಎಲ್ ಕಾರ್ಡ್‍ಗಳನ್ನು ಉಳಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿರುವವರು ಈ ಷರತ್ತುಗಳನ್ನು ಒಳಗೊಂಡಿರಬೇಕು.

  • ವಾರ್ಷಿಕ ಆದಾಯ 1.2 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು.
  • ಯಾವ ಸದಸ್ಯರು ಸರ್ಕಾರಿ ಹುದ್ದೆ ಅಥವಾ ಖಾಯಂ ನೌಕರಿಯಲ್ಲಿ ಇರಬಾರದು.
  • ನಗರದಲ್ಲಿ 1000 ಚದರ ಅಡಿಗಿಂತ ಹೆಚ್ಚು ಮನೆ ಜಾಗ ಇರಬಾರದು.
  • ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‍ಗಿಂತ ಹೆಚ್ಚು ಭೂಮಿ ಇರಬಾರದು.
  • ನಾಲ್ಕು ಚಕ್ರ ವಾಹನ ಇರಬಾರದು ಹಾಗೂ ಸದಸ್ಯರೂ ಆದಾಯ ತೆರಿಗೆ ಪಾವತಿಸುತ್ತಿರಬಾರದು.

ಸರ್ಕಾರದ ಈ ನಿಯಮಗಳಿಂದ ಕೆಲವೊಮ್ಮೆ ಅನರ್ಹರನ್ನು ತೆಗೆದುಹಾಕೊ ನಿಜವಾದ ಬಡವರ ಕಾರ್ಡ್ ರದ್ದುಗಿಳಿಸಿರುತ್ತದೆ. ಒಂದುವೇಳೆ ಈ ಎಲ್ಲಾ ಷರತ್ತುಗಳು ಒಳಗೊಂಡಿದ್ದರೂ, ಬಿಪಿಎಲ್ ಕಾರ್ಡ್ ಅನರ್ಹ ಎಂದು ರದ್ದಾಗಿದೆ ಎಂದರೆ ಸಮೀಪದ ಆಹಾರ ಇಲಾಖೆ ಕಚೇರಿ ಅಥವಾ ತಾಲೂಕು ಕಚೇರಿಗೆ ದೂರು ಸಲ್ಲಿಸಬಹುದು.

ನಿಮ್ಮ ಕಾರ್ಡ್ ರದ್ದು ಆಗಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಈ ವಿಧಾನ ನೋಡಿ:  https://mahitikanaja.karnataka.gov.in/FCS/MyRationCard ಈ ಲಿಂಕ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ತದನಂತರ ರೇಷನ್ ಕಾರ್ಡ್ ಸಂಖ್ಯೆಯನ್ನು ಟೈಮ್ ಮಾಡಿ  ಕ್ಲಿಕ್ ಮಾಡಿದರೆ ಸಾಕು.  ಕಾರ್ಡ್ ಸ್ಥಿತಿ ಆಕ್ಟೀವ್ ಎಂದು ಕಾಣಿಸಿದರೆ ನಿಮ್ಮ ಕಾರ್ಡ್ ಸುರಕ್ಷಿತ‌,   ಇನ್‍ ಆಕ್ಟೀವ್ ಎಂದು ಕಾಣಿಸಿಕೊಂಡರೆ ರದ್ದು ಆಗಿದೆ ಎಂದು ಅರ್ಥ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

10 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

11 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

13 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

13 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago